ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಅವರಿಗೆ ಪತ್ರ ಬರೆದಿರುವ ಬರಗೂರು, ‘ಏಳು ದಶಕಗಳಿಂದ ಪ್ರಸಾರ ಮಾಡಲಾಗುತ್ತಿದ್ದ ಕಾರ್ಯಕ್ರಮಕ್ಕೆ ಇತಿಶ್ರೀ ಹಾಡಲಾಗಿದೆ. ಇದು ಖಂಡನೀಯ ನಡೆಯಾಗಿದ್ದು, 25 ಲಕ್ಷಕ್ಕೂ ಅಧಿಕ ಮುಂಬೈ
ಕನ್ನಡಿಗರಿಗೆ ಅನ್ಯಾಯವಾಗಿದೆ. ಸಂವಿಧಾನಾತ್ಮಕವಾಗಿಯೂ ಇದು ಸರಿಯಾದ ಕ್ರಮವಲ್ಲ. ಸಾಕಷ್ಟು ಸಂಖ್ಯೆಯಲ್ಲಿರುವ ಭಾಷಾ ಅಲ್ಪಸಂಖ್ಯಾತ ಮುಂಬೈ ಕನ್ನಡಿಗರಿಗೆ ತಮ್ಮ ಭಾಷೆಯಲ್ಲೇ ಕಾರ್ಯಕ್ರಮಗಳನ್ನು ಕೇಳುವ ಅವಕಾಶವನ್ನು ಸಂವಿಧಾನದ ಆಶಯದಂತೆ ಒದಗಿಸಬೇಕು’ ಎಂದು ಅವರು ತಿಳಿಸಿದ್ದಾರೆ.