<p><strong>ಬೆಂಗಳೂರು:</strong> ‘ಮುಂಬೈ ಆಕಾಶವಾಣಿಯಲ್ಲಿ ಸ್ಥಗಿತಗೊಂಡಿರುವ ಕನ್ನಡ ಕಾರ್ಯಕ್ರಮವನ್ನು ಪುನರಾರಂಭಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಒತ್ತಾಯಿಸಿದ್ದಾರೆ.</p>.<p>ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಅವರಿಗೆ ಪತ್ರ ಬರೆದಿರುವ ಬರಗೂರು, ‘ಏಳು ದಶಕಗಳಿಂದ ಪ್ರಸಾರ ಮಾಡಲಾಗುತ್ತಿದ್ದ ಕಾರ್ಯಕ್ರಮಕ್ಕೆ ಇತಿಶ್ರೀ ಹಾಡಲಾಗಿದೆ. ಇದು ಖಂಡನೀಯ ನಡೆಯಾಗಿದ್ದು, 25 ಲಕ್ಷಕ್ಕೂ ಅಧಿಕ ಮುಂಬೈ<br />ಕನ್ನಡಿಗರಿಗೆ ಅನ್ಯಾಯವಾಗಿದೆ. ಸಂವಿಧಾನಾತ್ಮಕವಾಗಿಯೂ ಇದು ಸರಿಯಾದ ಕ್ರಮವಲ್ಲ. ಸಾಕಷ್ಟು ಸಂಖ್ಯೆಯಲ್ಲಿರುವ ಭಾಷಾ ಅಲ್ಪಸಂಖ್ಯಾತ ಮುಂಬೈ ಕನ್ನಡಿಗರಿಗೆ ತಮ್ಮ ಭಾಷೆಯಲ್ಲೇ ಕಾರ್ಯಕ್ರಮಗಳನ್ನು ಕೇಳುವ ಅವಕಾಶವನ್ನು ಸಂವಿಧಾನದ ಆಶಯದಂತೆ ಒದಗಿಸಬೇಕು’ ಎಂದು ಅವರು ತಿಳಿಸಿದ್ದಾರೆ.</p>.<p>‘ಇದರ ಬಗ್ಗೆ ಪ್ರಸಾರ ಭಾರತಿ ಅಧ್ಯಕ್ಷರು ಹಾಗೂ ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವರಿಗೆ ಮನವರಿಕೆ ಮಾಡಿಸಿ, ಕಾರ್ಯಕ್ರಮ ಪುನರಾರಂಭವಾಗಲು ಕಾರಣರಾಗಬೇಕು’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮುಂಬೈ ಆಕಾಶವಾಣಿಯಲ್ಲಿ ಸ್ಥಗಿತಗೊಂಡಿರುವ ಕನ್ನಡ ಕಾರ್ಯಕ್ರಮವನ್ನು ಪುನರಾರಂಭಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಒತ್ತಾಯಿಸಿದ್ದಾರೆ.</p>.<p>ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಅವರಿಗೆ ಪತ್ರ ಬರೆದಿರುವ ಬರಗೂರು, ‘ಏಳು ದಶಕಗಳಿಂದ ಪ್ರಸಾರ ಮಾಡಲಾಗುತ್ತಿದ್ದ ಕಾರ್ಯಕ್ರಮಕ್ಕೆ ಇತಿಶ್ರೀ ಹಾಡಲಾಗಿದೆ. ಇದು ಖಂಡನೀಯ ನಡೆಯಾಗಿದ್ದು, 25 ಲಕ್ಷಕ್ಕೂ ಅಧಿಕ ಮುಂಬೈ<br />ಕನ್ನಡಿಗರಿಗೆ ಅನ್ಯಾಯವಾಗಿದೆ. ಸಂವಿಧಾನಾತ್ಮಕವಾಗಿಯೂ ಇದು ಸರಿಯಾದ ಕ್ರಮವಲ್ಲ. ಸಾಕಷ್ಟು ಸಂಖ್ಯೆಯಲ್ಲಿರುವ ಭಾಷಾ ಅಲ್ಪಸಂಖ್ಯಾತ ಮುಂಬೈ ಕನ್ನಡಿಗರಿಗೆ ತಮ್ಮ ಭಾಷೆಯಲ್ಲೇ ಕಾರ್ಯಕ್ರಮಗಳನ್ನು ಕೇಳುವ ಅವಕಾಶವನ್ನು ಸಂವಿಧಾನದ ಆಶಯದಂತೆ ಒದಗಿಸಬೇಕು’ ಎಂದು ಅವರು ತಿಳಿಸಿದ್ದಾರೆ.</p>.<p>‘ಇದರ ಬಗ್ಗೆ ಪ್ರಸಾರ ಭಾರತಿ ಅಧ್ಯಕ್ಷರು ಹಾಗೂ ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವರಿಗೆ ಮನವರಿಕೆ ಮಾಡಿಸಿ, ಕಾರ್ಯಕ್ರಮ ಪುನರಾರಂಭವಾಗಲು ಕಾರಣರಾಗಬೇಕು’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>