<p><strong>ಮಂಡ್ಯ:</strong> ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ ಹಾಗೂ ಬಿಜೆಪಿ ಮುಖಂಡರಿಗೆ ಶ್ರೀರಂಗಪಟ್ಟಣ ತಾಲ್ಲೂಕು ಕೆಆರ್ಎಸ್ ಠಾಣೆ ಸಬ್ಇನ್ಸ್ಪೆಕ್ಟರ್ ನವೀನ್ಗೌಡ ಸಮವಸ್ತ್ರದಲ್ಲೇ ಊಟ ಬಡಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>ಸಚಿವ ಸಿ.ಸಿ.ಪಾಟೀಲ ಭಾನುವಾರ ಜಿಲ್ಲೆಯ ವಿವಿಧೆಡೆ ಕಲ್ಲುಗಣಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ ಕೆಆರ್ಎಸ್ ಆವರಣದಲ್ಲಿರುವ ಮಯೂರ ಹೋಟೆಲ್ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಸಚಿವರ ಜೊತೆ ಬಿಜೆಪಿ ಮುಖಂಡರೂ ಊಟಕ್ಕೆ ಕುಳಿತಿದ್ದರು. ಈ ಸಂದರ್ಭದಲ್ಲಿ ನವೀನ್ಗೌಡ್ ಊಟ ಬಡಿಸಿದ್ದಾರೆ.</p>.<p>ಊಟ ಬಡಿಸುತ್ತಿರುವ ದೃಶ್ಯಗಳು ವಾಟ್ಸ್ ಆ್ಯಪ್, ಫೇಸ್ಬುಕ್ಗಳಲ್ಲಿ ಹರಿದಾಡುತ್ತಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಶಿಸ್ತು ಪಾಲಿಸಬೇಕಾದ ಪೊಲೀಸ್ ಅಧಿಕಾರಿ ರಾಜಕಾರಣಿ, ರಾಜಕೀಯ ಪಕ್ಷದ ಮುಖಂಡರಿಗೆ ಊಟ ಬಡಿಸುವ ಮೂಲಕ ವೃತ್ತಿಗೆ ಅಗೌರವ ತಂದಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ. ನವೀನ್ಗೌಡ ಪ್ರತಿಕ್ರಿಯೆ ದೊರೆಯಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ ಹಾಗೂ ಬಿಜೆಪಿ ಮುಖಂಡರಿಗೆ ಶ್ರೀರಂಗಪಟ್ಟಣ ತಾಲ್ಲೂಕು ಕೆಆರ್ಎಸ್ ಠಾಣೆ ಸಬ್ಇನ್ಸ್ಪೆಕ್ಟರ್ ನವೀನ್ಗೌಡ ಸಮವಸ್ತ್ರದಲ್ಲೇ ಊಟ ಬಡಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>ಸಚಿವ ಸಿ.ಸಿ.ಪಾಟೀಲ ಭಾನುವಾರ ಜಿಲ್ಲೆಯ ವಿವಿಧೆಡೆ ಕಲ್ಲುಗಣಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ ಕೆಆರ್ಎಸ್ ಆವರಣದಲ್ಲಿರುವ ಮಯೂರ ಹೋಟೆಲ್ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಸಚಿವರ ಜೊತೆ ಬಿಜೆಪಿ ಮುಖಂಡರೂ ಊಟಕ್ಕೆ ಕುಳಿತಿದ್ದರು. ಈ ಸಂದರ್ಭದಲ್ಲಿ ನವೀನ್ಗೌಡ್ ಊಟ ಬಡಿಸಿದ್ದಾರೆ.</p>.<p>ಊಟ ಬಡಿಸುತ್ತಿರುವ ದೃಶ್ಯಗಳು ವಾಟ್ಸ್ ಆ್ಯಪ್, ಫೇಸ್ಬುಕ್ಗಳಲ್ಲಿ ಹರಿದಾಡುತ್ತಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಶಿಸ್ತು ಪಾಲಿಸಬೇಕಾದ ಪೊಲೀಸ್ ಅಧಿಕಾರಿ ರಾಜಕಾರಣಿ, ರಾಜಕೀಯ ಪಕ್ಷದ ಮುಖಂಡರಿಗೆ ಊಟ ಬಡಿಸುವ ಮೂಲಕ ವೃತ್ತಿಗೆ ಅಗೌರವ ತಂದಿದ್ದಾರೆ ಎಂಬ ಆಕ್ರೋಶ ವ್ಯಕ್ತವಾಗಿದೆ. ನವೀನ್ಗೌಡ ಪ್ರತಿಕ್ರಿಯೆ ದೊರೆಯಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>