ಪಕ್ಷದ ರಾಜ್ಯ ಘಟಕದ ಕಚೇರಿ ಜೆ.ಪಿ. ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜೆಡಿಎಸ್ ಮತ್ತು ನನ್ನನ್ನು ರಾಜಕೀಯದಿಂದ ಕಣ್ಮರೆ ಮಾಡಲು ಯಾರಿಗೂ ಸಾಧ್ಯವಿಲ್ಲ. ಜೆಡಿಎಸ್ ಅನ್ನು ಬಿಜೆಪಿಯ ‘ಬಿ ಟೀಮ್’ ಎಂದು ಸಿದ್ದರಾಮಯ್ಯ ಪದೇ ಪದೇ ಹೇಳುತ್ತಿದ್ದಾರೆ. ರಾಜಕೀಯದಲ್ಲಿ ಹೊಟ್ಟೆಪಾಡಿಗಾಗಿ ಈ ರೀತಿ ಮಾಡುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.