‘ಸಂವಿಧಾನದ ಆಶಯಗಳಿಗೆ ಕೊಳ್ಳಿ ಇಟ್ಟಿದ್ದೇ ಕಾಂಗ್ರೆಸ್ ಪಕ್ಷ. ಸಂಸತ್ತಿನಲ್ಲಿ ಚರ್ಚೆ ಮಾಡದೇ 40 ಸೆಕೆಂಡುಗಳಲ್ಲಿ ಇಂದಿರಾಗಾಂಧಿ ಮಸೂದೆ ಅಂಗೀಕರಿಸಿ, ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ತುರ್ತುಪರಿಸ್ಥಿತಿಯನ್ನು ಹೇರಿದರು. ಅಲ್ಲದೇ, ಅಂಬೇಡ್ಕರ್ ಅವರ ಆಶಯಕ್ಕೆ ವಿರುದ್ಧವಾಗಿ ದೇಶದಲ್ಲಿ ಎರಡೆರಡು ಧ್ವಜ ಹಾರಿಸಿದ್ದೂ ಕಾಂಗ್ರೆಸ್ ಪಕ್ಷ’ ಎಂದು ಬಿಜೆಪಿ ಹರಿಹಾಯ್ದಿದೆ.