ಈ ಕುರಿತು ಸೋಮವಾರ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ’ಸುಸಂಸ್ಕೃತರ, ಸಂಭಾವಿತರ ಪಕ್ಷ ಎಂದು ತಮ್ಮನ್ನು ತಾವು ಕರೆದುಕೊಳ್ಳುವ ಬಿಜೆಪಿಯಲ್ಲಿ, ಒಬ್ಬರಾದ ಮೇಲೆ ಒಬ್ಬರು ಮಾನಹಾನಿಯಾಗುವಂತ ವೀಡಿಯೋ ಪ್ರಸಾರ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತರುತ್ತಿದ್ದಾರೆ. ಇದು ಬಿಜೆಪಿಯವರ ಸಂಸ್ಕೃತಿಯ ಅಸಲಿಯತ್ತು,‘ ಎಂದು ಕುಹಕವಾಡಿದ್ದಾರೆ.