<p><strong>ಮಂಡ್ಯ</strong>: ‘ಸಾಮಾಜಿಕ ನ್ಯಾಯ ಎಂಬುದು ಭಾಷಣದ ಸರಕಾಗಿದೆ, ಮಾತಿನಿಂದ ಯಾರನ್ನೂ ಮರಳು ಮಾಡಲು ಸಾಧ್ಯವಿಲ್ಲ. ನಾಮಕಾವಸ್ತೆ ಯೋಜನೆಗಳಿಂದ ಜನರನ್ನು ಮೆಚ್ಚಿಸಲು ಸಾಧ್ಯವಿಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಪರೋಕ್ಷವಾಗಿ ಟೀಕಿಸಿದರು.</p>.<p>ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ನಗರದ ಮಂಡ್ಯ ವಿವಿ ಆವರಣದಲ್ಲಿ ಗುರುವಾರ ‘ಸಂಜೀವಿನಿ ಸಾಮರ್ಥ್ಯ, ಜೀವನೋಪಾಯ ವರ್ಷ: 2022–23’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘60 ತಿಂಗಳ ಅಧಿಕಾರದಲ್ಲಿ 59 ತಿಂಗಳು ಅಭಿವೃದ್ಧಿ ಕೆಲಸ ಮಾಡಬೇಕು, 1 ತಿಂಗಳು ಮಾತ್ರ ರಾಜಕಾರಣ ಮಾಡಬೇಕು. ನಾವು ನುಡಿದಂತೆ ನಡೆಯುತ್ತಿದ್ದೇವೆ, ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುತ್ತಿದ್ದೇವೆ’ ಎಂದರು.</p>.<p>‘ಹೆಣ್ಣು ಮಕ್ಕಳಿಗೆ ದುಡಿಯುವ ಅವಕಾಶ ನೀಡುವ ಉದ್ದೇಶದಿಂದ ರಾಜ್ಯದ ಪ್ರತಿ ಹಳ್ಳಿಯ ಒಂದು ಮಹಿಳಾ ಸ್ವಸಹಾರ ಸಂಘಕ್ಕೆ ₹ 1.50 ಲಕ್ಷ ಧನಸಹಾಯ ನೀಡಲಾಗುವುದು. ಅದಕ್ಕಾಗಿ ₹ 500 ಕೋಟಿ ಮೀಸಲಿಡಲಾಗಿದೆ. ಯುವಜನರಿಗೆ ಉದ್ಯೋಗ ನೀಡುವ ಉದ್ದೇಶದಿಂದ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಅಡಿ ಪ್ರತಿ ಹಳ್ಳಿಯ ಒಂದು ಯುವ ಸಂಘಟನೆಗೂ ₹ 1.50 ಲಕ್ಷ ನೀಡಲಾಗುವುದು’ ಎಂದರು.</p>.<p>ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ ‘ಮಹಿಳಾ ಸಂಘಗಳು ಉತ್ಪಾದಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ನೀಡಲು ಅಮೆಜಾನ್ ಕಂಪನಿ ವಾರ್ಷಿಕ ₹ 80 ಸಾವಿರ ಕೋಟಿ ಮೌಲ್ಯದ ಮಾರುಕಟ್ಟೆ ಒದಗಿಸಲು ಮುಂದೆ ಬಂದಿದೆ. ಫ್ಲಿಕ್ ಕಾರ್ಟ್, ಮಿಶೋ ಕಂಪನಿಗಳು ಕೂಡ ಮಾರುಕಟ್ಟೆ ಒದಗಿಸಲು ಮುಂದಾಗಿವೆ’ ಎಂದರು.</p>.<p>****</p>.<p><strong>ಎಸಿಬಿ ವಜಾ:ತಜ್ಞರೊಂದಿಗೆ ಚರ್ಚಿಸಿ ಕ್ರಮ</strong></p>.<p>‘ಹೈಕೋರ್ಟ್ ಎಸಿಬಿ ರಚನೆ ವಜಾ ಮಾಡಿರುವ ವಿಷಯ ತಿಳಿದಿದೆ. ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಹೆಜ್ಜೆ ಇಡಲಾಗುವುದು. ಕೋರ್ಟ್ ಆದೇಶ ನೋಡಿದ ನಂತರ ಪ್ರತಿಕ್ರಿಯಿಸುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>‘ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಕೊಲೆಯ ಹಿಂದೆ ಇರುವವರ ಮಾಹಿತಿ ಶೀಘ್ರ ಗೊತ್ತಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ‘ಸಾಮಾಜಿಕ ನ್ಯಾಯ ಎಂಬುದು ಭಾಷಣದ ಸರಕಾಗಿದೆ, ಮಾತಿನಿಂದ ಯಾರನ್ನೂ ಮರಳು ಮಾಡಲು ಸಾಧ್ಯವಿಲ್ಲ. ನಾಮಕಾವಸ್ತೆ ಯೋಜನೆಗಳಿಂದ ಜನರನ್ನು ಮೆಚ್ಚಿಸಲು ಸಾಧ್ಯವಿಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಪರೋಕ್ಷವಾಗಿ ಟೀಕಿಸಿದರು.</p>.<p>ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ನಗರದ ಮಂಡ್ಯ ವಿವಿ ಆವರಣದಲ್ಲಿ ಗುರುವಾರ ‘ಸಂಜೀವಿನಿ ಸಾಮರ್ಥ್ಯ, ಜೀವನೋಪಾಯ ವರ್ಷ: 2022–23’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘60 ತಿಂಗಳ ಅಧಿಕಾರದಲ್ಲಿ 59 ತಿಂಗಳು ಅಭಿವೃದ್ಧಿ ಕೆಲಸ ಮಾಡಬೇಕು, 1 ತಿಂಗಳು ಮಾತ್ರ ರಾಜಕಾರಣ ಮಾಡಬೇಕು. ನಾವು ನುಡಿದಂತೆ ನಡೆಯುತ್ತಿದ್ದೇವೆ, ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುತ್ತಿದ್ದೇವೆ’ ಎಂದರು.</p>.<p>‘ಹೆಣ್ಣು ಮಕ್ಕಳಿಗೆ ದುಡಿಯುವ ಅವಕಾಶ ನೀಡುವ ಉದ್ದೇಶದಿಂದ ರಾಜ್ಯದ ಪ್ರತಿ ಹಳ್ಳಿಯ ಒಂದು ಮಹಿಳಾ ಸ್ವಸಹಾರ ಸಂಘಕ್ಕೆ ₹ 1.50 ಲಕ್ಷ ಧನಸಹಾಯ ನೀಡಲಾಗುವುದು. ಅದಕ್ಕಾಗಿ ₹ 500 ಕೋಟಿ ಮೀಸಲಿಡಲಾಗಿದೆ. ಯುವಜನರಿಗೆ ಉದ್ಯೋಗ ನೀಡುವ ಉದ್ದೇಶದಿಂದ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಅಡಿ ಪ್ರತಿ ಹಳ್ಳಿಯ ಒಂದು ಯುವ ಸಂಘಟನೆಗೂ ₹ 1.50 ಲಕ್ಷ ನೀಡಲಾಗುವುದು’ ಎಂದರು.</p>.<p>ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ ‘ಮಹಿಳಾ ಸಂಘಗಳು ಉತ್ಪಾದಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ನೀಡಲು ಅಮೆಜಾನ್ ಕಂಪನಿ ವಾರ್ಷಿಕ ₹ 80 ಸಾವಿರ ಕೋಟಿ ಮೌಲ್ಯದ ಮಾರುಕಟ್ಟೆ ಒದಗಿಸಲು ಮುಂದೆ ಬಂದಿದೆ. ಫ್ಲಿಕ್ ಕಾರ್ಟ್, ಮಿಶೋ ಕಂಪನಿಗಳು ಕೂಡ ಮಾರುಕಟ್ಟೆ ಒದಗಿಸಲು ಮುಂದಾಗಿವೆ’ ಎಂದರು.</p>.<p>****</p>.<p><strong>ಎಸಿಬಿ ವಜಾ:ತಜ್ಞರೊಂದಿಗೆ ಚರ್ಚಿಸಿ ಕ್ರಮ</strong></p>.<p>‘ಹೈಕೋರ್ಟ್ ಎಸಿಬಿ ರಚನೆ ವಜಾ ಮಾಡಿರುವ ವಿಷಯ ತಿಳಿದಿದೆ. ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಹೆಜ್ಜೆ ಇಡಲಾಗುವುದು. ಕೋರ್ಟ್ ಆದೇಶ ನೋಡಿದ ನಂತರ ಪ್ರತಿಕ್ರಿಯಿಸುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>‘ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಕೊಲೆಯ ಹಿಂದೆ ಇರುವವರ ಮಾಹಿತಿ ಶೀಘ್ರ ಗೊತ್ತಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>