'ತಮಿಳುನಾಡನ್ನು ಒಪ್ಪಿಸೋ ತಾಕತ್ತು ಸಿದ್ದರಾಮಯ್ಯ ಅವರಿಗಿದೆ. ಒಂದು ಗುಟುರು ಹಾಕಿದ್ರೆ ಸಾಕು' ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಸಿ.ಟಿ.ರವಿ ಅವರ ಹೇಳಿಕೆಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, 'ಹೆಚ್ಚು ಮಾತು ಬೇಡ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜೀನಾಮೆ ಕೊಡಲು ಹೇಳಿ ಬಿಡಿ' ಎಂದು ತಿರುಗೇಟು ನೀಡಿದ್ದಾರೆ.