ರಾಜ್ಯ ಬಜೆಟ್ ಅಧಿವೇಶನ ಮುಗಿಯುತ್ತಿದ್ದಂತೆ ಮೊದಲ ಹಂತದಲ್ಲಿ ನಾಲ್ಕು ವಿಭಾಗಗಳಲ್ಲಿ ಬೃಹತ್ ಸಮಾವೇಶಗಳನ್ನು ಆಯೋಜಿಸುವುದು ಈ ಹೋರಾಟದ ಭಾಗವಾಗಿದೆ. ಈ ಉದ್ದೇಶದಿಂದ ಶಾಸಕರು, ಮಾಜಿ ಶಾಸಕರು, ಸಂಸದರು, ಮಾಜಿ ಸಂಸದರು, ಚುನಾವಣೆಗಳಲ್ಲಿ ಸ್ಪರ್ಧಿಸಿ ಸೋಲು ಕಂಡ ಅಭ್ಯರ್ಥಿಗಳು, ಜಾತಿ, ಸಮುದಾಯಗಳ ಮುಖಂಡರ ಪೂರ್ವಭಾವಿ ಸಭೆಯನ್ನು ಅವರು ಶೀಘ್ರದಲ್ಲೇ ಕರೆಯಲಿದ್ದಾರೆ ಎಂದು ಸಿದ್ದರಾಮಯ್ಯ ಅವರ ಆಪ್ತ ಮೂಲಗಳು ತಿಳಿಸಿವೆ.