ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಯಾವುದೇ ಪಾಪ ಮಾಡಿಲ್ಲ: ಕಾಂಗ್ರೆಸ್‌ ಶಾಸಕ ಡಾ.ಯತೀಂದ್ರ

Last Updated 2 ಜುಲೈ 2021, 8:10 IST
ಅಕ್ಷರ ಗಾತ್ರ

ಮೈಸೂರು: ‘ಸಿದ್ದರಾಮಯ್ಯ ಅವರು ಯಾವುದೇ ಪಾಪ ಮಾಡಿಲ್ಲ. ಅವರ ನೇತೃತ್ವದಲ್ಲೇ ಕಾಂಗ್ರೆಸ್‌ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ’ ಎಂದು ಅವರ ಪುತ್ರ, ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಶುಕ್ರವಾರ ಹೇಳಿದರು.

‘ಜೆಡಿಎಸ್ ಪಕ್ಷದ ಬೆನ್ನಿಗೆ ಚೂರಿ ಹಾಕಿ ಹೋದವರ ಪಾಪದ ಕೊಡ ತುಂಬಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಸಿದ್ದರಾಮಯ್ಯ ಯಾವತ್ತೂ ಜೆಡಿಎಸ್‌ಗೆ ಮೋಸ ಮಾಡಿಲ್ಲ. ಜೆಡಿಎಸ್‌ನಲ್ಲಿ ನಾಯಕರಾಗಿ ಬೆಳೆಯುತ್ತಿದ್ದ ಕಾರಣ ಅವರನ್ನು ಆ ಪಕ್ಷದಿಂದ ಉಚ್ಚಾಟನೆ ಮಾಡಲಾಯಿತು. ಆದ್ದರಿಂದ ಯಾರೂ, ಯಾವುದೇ ಪಾಪವನ್ನೂ ಮಾಡಿಲ್ಲ’ ಎಂದು ತಿರುಗೇಟು ನೀಡಿದರು.

‘ಜೆಡಿಎಸ್‌ನಿಂದ ಹೊರ ಬಂದ ಬಳಿಕ ಅವರಿಗೆ ಒಳ್ಳೆಯದೇ ಆಗಿದೆ. ಜೆಡಿಎಸ್‌ ಪಕ್ಷ ತನ್ನ ನೆಲೆ ಕಳೆದುಕೊಳ್ಳಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT