ಸೋಮವಾರ, 5 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸಭೆ ಚುನಾವಣೆ: ಸಿದ್ದರಾಮಯ್ಯ ಸ್ಥಿತಿ‌ ಓಡು‌‌ ಮಗಾ ಓಡು; ಸಚಿವ ಅಶೋಕ ಟೀಕೆ

Last Updated 26 ಫೆಬ್ರವರಿ 2023, 7:45 IST
ಅಕ್ಷರ ಗಾತ್ರ

ಬಾಗಲಕೋಟೆ: ಸುಳ್ಳು ಹೇಳಿದ್ದರಿಂದಲೇ ಸಿದ್ದರಾಮಯ್ಯ‌ ಅವರ ಸ್ಥಿತಿ ಓಡು ಮಗಾ ಓಡು ಎನ್ನುವಂತಾಗಿದೆ ಎಂದು ಕಂದಾಯ ಸಚಿವ ಆರ್.‌ಅಶೋಕ ಟೀಕಿಸಿದರು

ಬಿಜೆಪಿಗರು ಸುಳ್ಳಿಗರು ಎಂಬ ಸಿದ್ದರಾಮಯ್ಯ ಅವರ ಟೀಕೆಗೆ ಉತ್ತರಿಸಿದ‌‌ ಅವರು, ಸುಳ್ಳು ಹೇಳುತ್ತಿರುವುದರಿಂದಲೇ ಕ್ಷೇತ್ರದಿಂದ ಕ್ಷೇತ್ರಕ್ಕೆ ಓಡುತ್ತಿದ್ದಾರೆ‌ ಎಂದರು.

ವರುಣಾದಿಂದ ಚಾಮುಂಡೇಶ್ವರಿಗೆ,‌ ಅಲ್ಲಿಂದ ಬಾದಾಮಿಗೆ, ಈಗ ಅಲ್ಲಿಂದ ಕೋಲಾರಕ್ಕೆ ಹೋಗುತ್ತಿರುವುದು ಏಕೆ ಎಂದು ಪ್ರಶ್ನಿಸಿದರು.

ಬಾದಾಮಿಯಲ್ಲಿ ಹೇಳಿದ ಭರವಸೆ ಈಡೇರಿಸದ್ದರಿಂದ ಸೋಲಿನ ಭೀತಿಯಿಂದ ಓಡಿ ಹೋಗುತ್ತಿದ್ದಾರೆ. ಕಲಾದಗಿಗೂ ಬಾದಾಮಿ ಜನರು ಬಂದು ಅಹವಾಲು ಸಲ್ಲಿಸಿದ್ದಾರೆ. ಇದು ಅವರು ಕೆಲಸ ಮಾಡದ್ದನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದರು.

ಕೆಲಸ ಮಾಡಿದರೆ ಜನ ಪ್ರೀತಿಯಿಂದ ನೋಡುತ್ತಾರೆ. ಕೆಲಸ ಮಾಡದೆ‌ ಪ್ರೀತಿ ತೋರಿಸು ಎಂದರೆ‌ ಯಾರು ತೋರಿಸುತ್ತಾರೆ. ಜನರ ಪ್ರೀತಿ ಗಳಿಸಿ ಒಂದೆಡೆ ನಿಲ್ಲಬೇಕು ಎಂದು ಟೀಕಿಸಿದರು.

ಸಿದ್ದರಾಮಯ್ಯ ಅಧಿಕಾರ ಬಂದಾಗ ಭಾಷಣ ಮಾಡಿಕೊಂಡು ತಿರುಗಾಡುತ್ತಾರೆ. ಅಧಿಕಾರ ಹೋದ ಮೇಲೆ ಕ್ಷೇತ್ರಕ್ಕೆ ಬಂದು ಇನ್ನೊಂದು ಅವಕಾಶ ಕೊಡಿ ಎನ್ನುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT