<p><strong>ಬಾಗಲಕೋಟೆ: </strong>ಸುಳ್ಳು ಹೇಳಿದ್ದರಿಂದಲೇ ಸಿದ್ದರಾಮಯ್ಯ ಅವರ ಸ್ಥಿತಿ ಓಡು ಮಗಾ ಓಡು ಎನ್ನುವಂತಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಟೀಕಿಸಿದರು</p>.<p>ಬಿಜೆಪಿಗರು ಸುಳ್ಳಿಗರು ಎಂಬ ಸಿದ್ದರಾಮಯ್ಯ ಅವರ ಟೀಕೆಗೆ ಉತ್ತರಿಸಿದ ಅವರು, ಸುಳ್ಳು ಹೇಳುತ್ತಿರುವುದರಿಂದಲೇ ಕ್ಷೇತ್ರದಿಂದ ಕ್ಷೇತ್ರಕ್ಕೆ ಓಡುತ್ತಿದ್ದಾರೆ ಎಂದರು.</p>.<p>ವರುಣಾದಿಂದ ಚಾಮುಂಡೇಶ್ವರಿಗೆ, ಅಲ್ಲಿಂದ ಬಾದಾಮಿಗೆ, ಈಗ ಅಲ್ಲಿಂದ ಕೋಲಾರಕ್ಕೆ ಹೋಗುತ್ತಿರುವುದು ಏಕೆ ಎಂದು ಪ್ರಶ್ನಿಸಿದರು.</p>.<p>ಬಾದಾಮಿಯಲ್ಲಿ ಹೇಳಿದ ಭರವಸೆ ಈಡೇರಿಸದ್ದರಿಂದ ಸೋಲಿನ ಭೀತಿಯಿಂದ ಓಡಿ ಹೋಗುತ್ತಿದ್ದಾರೆ. ಕಲಾದಗಿಗೂ ಬಾದಾಮಿ ಜನರು ಬಂದು ಅಹವಾಲು ಸಲ್ಲಿಸಿದ್ದಾರೆ. ಇದು ಅವರು ಕೆಲಸ ಮಾಡದ್ದನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದರು.</p>.<p>ಕೆಲಸ ಮಾಡಿದರೆ ಜನ ಪ್ರೀತಿಯಿಂದ ನೋಡುತ್ತಾರೆ. ಕೆಲಸ ಮಾಡದೆ ಪ್ರೀತಿ ತೋರಿಸು ಎಂದರೆ ಯಾರು ತೋರಿಸುತ್ತಾರೆ. ಜನರ ಪ್ರೀತಿ ಗಳಿಸಿ ಒಂದೆಡೆ ನಿಲ್ಲಬೇಕು ಎಂದು ಟೀಕಿಸಿದರು.</p>.<p>ಸಿದ್ದರಾಮಯ್ಯ ಅಧಿಕಾರ ಬಂದಾಗ ಭಾಷಣ ಮಾಡಿಕೊಂಡು ತಿರುಗಾಡುತ್ತಾರೆ. ಅಧಿಕಾರ ಹೋದ ಮೇಲೆ ಕ್ಷೇತ್ರಕ್ಕೆ ಬಂದು ಇನ್ನೊಂದು ಅವಕಾಶ ಕೊಡಿ ಎನ್ನುತ್ತಾರೆ ಎಂದು ವಾಗ್ದಾಳಿ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ಸುಳ್ಳು ಹೇಳಿದ್ದರಿಂದಲೇ ಸಿದ್ದರಾಮಯ್ಯ ಅವರ ಸ್ಥಿತಿ ಓಡು ಮಗಾ ಓಡು ಎನ್ನುವಂತಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಟೀಕಿಸಿದರು</p>.<p>ಬಿಜೆಪಿಗರು ಸುಳ್ಳಿಗರು ಎಂಬ ಸಿದ್ದರಾಮಯ್ಯ ಅವರ ಟೀಕೆಗೆ ಉತ್ತರಿಸಿದ ಅವರು, ಸುಳ್ಳು ಹೇಳುತ್ತಿರುವುದರಿಂದಲೇ ಕ್ಷೇತ್ರದಿಂದ ಕ್ಷೇತ್ರಕ್ಕೆ ಓಡುತ್ತಿದ್ದಾರೆ ಎಂದರು.</p>.<p>ವರುಣಾದಿಂದ ಚಾಮುಂಡೇಶ್ವರಿಗೆ, ಅಲ್ಲಿಂದ ಬಾದಾಮಿಗೆ, ಈಗ ಅಲ್ಲಿಂದ ಕೋಲಾರಕ್ಕೆ ಹೋಗುತ್ತಿರುವುದು ಏಕೆ ಎಂದು ಪ್ರಶ್ನಿಸಿದರು.</p>.<p>ಬಾದಾಮಿಯಲ್ಲಿ ಹೇಳಿದ ಭರವಸೆ ಈಡೇರಿಸದ್ದರಿಂದ ಸೋಲಿನ ಭೀತಿಯಿಂದ ಓಡಿ ಹೋಗುತ್ತಿದ್ದಾರೆ. ಕಲಾದಗಿಗೂ ಬಾದಾಮಿ ಜನರು ಬಂದು ಅಹವಾಲು ಸಲ್ಲಿಸಿದ್ದಾರೆ. ಇದು ಅವರು ಕೆಲಸ ಮಾಡದ್ದನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದರು.</p>.<p>ಕೆಲಸ ಮಾಡಿದರೆ ಜನ ಪ್ರೀತಿಯಿಂದ ನೋಡುತ್ತಾರೆ. ಕೆಲಸ ಮಾಡದೆ ಪ್ರೀತಿ ತೋರಿಸು ಎಂದರೆ ಯಾರು ತೋರಿಸುತ್ತಾರೆ. ಜನರ ಪ್ರೀತಿ ಗಳಿಸಿ ಒಂದೆಡೆ ನಿಲ್ಲಬೇಕು ಎಂದು ಟೀಕಿಸಿದರು.</p>.<p>ಸಿದ್ದರಾಮಯ್ಯ ಅಧಿಕಾರ ಬಂದಾಗ ಭಾಷಣ ಮಾಡಿಕೊಂಡು ತಿರುಗಾಡುತ್ತಾರೆ. ಅಧಿಕಾರ ಹೋದ ಮೇಲೆ ಕ್ಷೇತ್ರಕ್ಕೆ ಬಂದು ಇನ್ನೊಂದು ಅವಕಾಶ ಕೊಡಿ ಎನ್ನುತ್ತಾರೆ ಎಂದು ವಾಗ್ದಾಳಿ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>