<p><strong>ಬೆಂಗಳೂರು</strong>: ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲು ಲೋಕಸಭಾಧ್ಯಕ್ಷರನ್ನು ಆಹ್ವಾನಿಸಿರುವುದು ಸಂಸದೀಯ ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ದವಾದುದು. ಇಂದು (ಶುಕ್ರವಾರ) ನಡೆಯುವ ಕಾರ್ಯಕ್ರಮವನ್ನು ಕಾಂಗ್ರೆಸ್ ಶಾಸಕರು ಬಹಿಷ್ಕರಿಸಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಅವರು, 'ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಮಾತ್ರ ಪಾಲ್ಗೊಳ್ಳಲು ನಿಯಮಾವಳಿಗಳಲ್ಲಿ ಅವಕಾಶವಿದೆ. ಲೋಕಸಭಾಧ್ಯಕ್ಷರ ಕಾರ್ಯಕ್ರಮವನ್ನು ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಸಿ ಎಂದು ಹೇಳಿದ್ದೆವು. ಅವರು(ಸರ್ಕಾರ) ಒಪ್ಪದೆ ಇದ್ದ ಕಾರಣ ಬಹಿಷ್ಕಾರ ಅನಿವಾರ್ಯವಾಗಿದೆ' ಎಂದು ಹೇಳಿದ್ದಾರೆ.</p>.<p>'ಲೋಕಸಭಾದ್ಯಕ್ಷರನ್ನು ವಿಧಾನಮಂಡಲಕ್ಕೆ ಆಹ್ವಾನಿಸುವುದು ಒಂದು ಕೆಟ್ಟ ಸಂಪ್ರದಾಯವಾಗಿದೆ. ಈಗಲೂ ಕಾಲ ಮಿಂಚಿಲ್ಲ. ವಿಧಾನಸಭಾಧ್ಯಕ್ಷರು ಮತ್ತು ಮುಖ್ಯಮಂತ್ರಿಗಳು ಈ ಕಾರ್ಯಕ್ರಮವನ್ನು ವಿಧಾನಮಂಡಲದಿಂದ ಬ್ಯಾಂಕ್ವೆಟ್ ಸಭಾಂಗಣಕ್ಕೆ ಸ್ಥಳಾಂತರಿಸಿ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು' ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲು ಲೋಕಸಭಾಧ್ಯಕ್ಷರನ್ನು ಆಹ್ವಾನಿಸಿರುವುದು ಸಂಸದೀಯ ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ದವಾದುದು. ಇಂದು (ಶುಕ್ರವಾರ) ನಡೆಯುವ ಕಾರ್ಯಕ್ರಮವನ್ನು ಕಾಂಗ್ರೆಸ್ ಶಾಸಕರು ಬಹಿಷ್ಕರಿಸಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಅವರು, 'ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಮಾತ್ರ ಪಾಲ್ಗೊಳ್ಳಲು ನಿಯಮಾವಳಿಗಳಲ್ಲಿ ಅವಕಾಶವಿದೆ. ಲೋಕಸಭಾಧ್ಯಕ್ಷರ ಕಾರ್ಯಕ್ರಮವನ್ನು ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಸಿ ಎಂದು ಹೇಳಿದ್ದೆವು. ಅವರು(ಸರ್ಕಾರ) ಒಪ್ಪದೆ ಇದ್ದ ಕಾರಣ ಬಹಿಷ್ಕಾರ ಅನಿವಾರ್ಯವಾಗಿದೆ' ಎಂದು ಹೇಳಿದ್ದಾರೆ.</p>.<p>'ಲೋಕಸಭಾದ್ಯಕ್ಷರನ್ನು ವಿಧಾನಮಂಡಲಕ್ಕೆ ಆಹ್ವಾನಿಸುವುದು ಒಂದು ಕೆಟ್ಟ ಸಂಪ್ರದಾಯವಾಗಿದೆ. ಈಗಲೂ ಕಾಲ ಮಿಂಚಿಲ್ಲ. ವಿಧಾನಸಭಾಧ್ಯಕ್ಷರು ಮತ್ತು ಮುಖ್ಯಮಂತ್ರಿಗಳು ಈ ಕಾರ್ಯಕ್ರಮವನ್ನು ವಿಧಾನಮಂಡಲದಿಂದ ಬ್ಯಾಂಕ್ವೆಟ್ ಸಭಾಂಗಣಕ್ಕೆ ಸ್ಥಳಾಂತರಿಸಿ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು' ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>