<p><strong>ಬೆಳಗಾವಿ:</strong> ‘ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.</p>.<p>‘ಸಿದ್ದರಾಮಯ್ಯ ಪ್ರಿಪ್ಲಾನ್ನಿಂದ ನನ್ನ ಹೆಸರು ಹಾಳು ಮಾಡಿದರು’ ಎಂಬ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ‘ರಾಜಕೀಯದ ಅನುಕುಲಕ್ಕೆ ತಕ್ಕಂತೆ ಹೇಳಿಕೆ ಕೊಡುತ್ತಿರುತ್ತಾರೆ. ಅವರ ಮಾತಿನಲ್ಲಿ ಸತ್ಯ ಇರುವುದಿಲ್ಲ’ ಎಂದರು.</p>.<p>‘ದೇವೇಗೌಡರ ಕುಟುಂಬದವರಿಗೆ ಕಣ್ಣೀರು ಹಾಕುವುದು ಹೊಸತೇನಲ್ಲ. ಅವರು ಒಳ್ಳೆಯದು ಮತ್ತು ಕೆಟ್ಟದ್ದೆರಡಕ್ಕೂ ಕಣ್ಣೀರಿಡುತ್ತಾರೆ. ಇನ್ಯಾರನ್ನೋ ಓಲೈಸಲು ಕಣ್ಣೀರು ಹಾಕುತ್ತಾರೆ. ನಂಬಿಸಲು ಕಣ್ಣೀರಿಡುತ್ತಾರೆ. ಕುಮಾರಸ್ವಾಮಿ ಸೇರಿದಂತೆ ಆ ಕುಟುಂಬದವರ ಕಣ್ಣೀರಿಗೆ ಬೆಲೆ ಇಲ್ಲ’ ಎಂದು ವ್ಯಂಗ್ಯವಾಡಿದರು.</p>.<p>‘ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರವಿದ್ದಾಗ 12 ತಿಂಗಳು ಅಧಿಕಾರ ನಡೆಸಿದ್ದಾರೆ. ಆದರೆ, ಅವರು ಆಡಳಿತ ನಡೆಸಿದ್ದು ಸ್ಟಾರ್ ಹೋಟೆಲ್ನಿಂದ. ಅದೇ ಅವರ ಕೇಂದ್ರ ಸ್ಥಾನವಾಗಿತ್ತು. ಯಾವ ಶಾಸಕ ಹಾಗೂ ಸಚಿವರ ಕೈಗೂ ಸಿಗಲಿಲ್ಲ ಆ ಆಸಾಮಿ. ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ನೂರಾರು ಕೋಟಿ ರೂಪಾಯಿಅನುದಾನ ಕೊಟ್ಟೆ ಎನ್ನುತ್ತಾರಲ್ಲಾ ಅವರೇನು ಅವರ ಮನೆಯಿಂದ ಕೊಟ್ಟಿದ್ದರಾ? ನಾನು ಮುಖ್ಯಮಂತ್ರಿ ಆಗಿದ್ದಾಗಲೂ ಕೊಟ್ಟಿದ್ದೆ. ಅದು ಜನರ ತೆರಿಗೆಯ ಹಣ’ ಎಂದು ತಿರುಗೇಟು ನೀಡಿದರು.</p>.<p>‘ಸಮ್ಮಿಶ್ರ ಸರ್ಕಾರ ಪತನ ಆಗಬೇಕೆಂದೇ ನಾನು ಅಮೆರಿಕಕ್ಕೆ ಹೋದೆ ಎಂದು ಕುಮಾರಸ್ವಾಮಿಯೇ ಹೇಳಿಕೆ ನೀಡಿದ್ದಾರೆ. ಅದನ್ಯಾರು ಯಾಕೆ ಪ್ರಶ್ನೆ ಮಾಡುವುದಿಲ್ಲ?’ ಎಂದು ಕೇಳಿದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/district/mysore/karnataka-politics-jds-leader-hd-kumaraswamy-targets-congress-leader-siddaramaiah-784631.html" itemprop="url">ಸಿದ್ದರಾಮಯ್ಯ ಕುತಂತ್ರ, ಗೌಡರ ಭಾವನಾತ್ಮಕ ಮಾತಿಗೆ ಕೆಟ್ಟೆ: ಕುಮಾರಸ್ವಾಮಿ </a></p>.<p>‘ಅವರಿಗೆ ಗುಡ್ ವಿಲ್ ಇಲ್ಲ. ಅದಿದ್ದರೆ ಅಲ್ವಾ ಹಾಳಾಗುವ ಪ್ರಶ್ನೆ ಬರುವುದು’ ಎಂದುಪ್ರಶ್ನಿಸಿದರು.</p>.<p>‘ಜೆಡಿಎಸ್–ಕಾಂಗ್ರೆಸ್ ಸರ್ಕಾರದ ಪತನ ಮುಗಿದ ಅಧ್ಯಾಯ. ಆ ಬಗ್ಗೆ ಈಗ ಚರ್ಚಿಸುವ ಅಗತ್ಯವಿಲ್ಲ. ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ತಿಳಿಯಲು ಸತ್ಯ ಶೋಧನಾ ಸಮಿತಿ ರೀತಿಯ ಸಮಿತಿ ರಚಿಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.</p>.<p>‘ಸಿದ್ದರಾಮಯ್ಯ ಪ್ರಿಪ್ಲಾನ್ನಿಂದ ನನ್ನ ಹೆಸರು ಹಾಳು ಮಾಡಿದರು’ ಎಂಬ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ‘ರಾಜಕೀಯದ ಅನುಕುಲಕ್ಕೆ ತಕ್ಕಂತೆ ಹೇಳಿಕೆ ಕೊಡುತ್ತಿರುತ್ತಾರೆ. ಅವರ ಮಾತಿನಲ್ಲಿ ಸತ್ಯ ಇರುವುದಿಲ್ಲ’ ಎಂದರು.</p>.<p>‘ದೇವೇಗೌಡರ ಕುಟುಂಬದವರಿಗೆ ಕಣ್ಣೀರು ಹಾಕುವುದು ಹೊಸತೇನಲ್ಲ. ಅವರು ಒಳ್ಳೆಯದು ಮತ್ತು ಕೆಟ್ಟದ್ದೆರಡಕ್ಕೂ ಕಣ್ಣೀರಿಡುತ್ತಾರೆ. ಇನ್ಯಾರನ್ನೋ ಓಲೈಸಲು ಕಣ್ಣೀರು ಹಾಕುತ್ತಾರೆ. ನಂಬಿಸಲು ಕಣ್ಣೀರಿಡುತ್ತಾರೆ. ಕುಮಾರಸ್ವಾಮಿ ಸೇರಿದಂತೆ ಆ ಕುಟುಂಬದವರ ಕಣ್ಣೀರಿಗೆ ಬೆಲೆ ಇಲ್ಲ’ ಎಂದು ವ್ಯಂಗ್ಯವಾಡಿದರು.</p>.<p>‘ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರವಿದ್ದಾಗ 12 ತಿಂಗಳು ಅಧಿಕಾರ ನಡೆಸಿದ್ದಾರೆ. ಆದರೆ, ಅವರು ಆಡಳಿತ ನಡೆಸಿದ್ದು ಸ್ಟಾರ್ ಹೋಟೆಲ್ನಿಂದ. ಅದೇ ಅವರ ಕೇಂದ್ರ ಸ್ಥಾನವಾಗಿತ್ತು. ಯಾವ ಶಾಸಕ ಹಾಗೂ ಸಚಿವರ ಕೈಗೂ ಸಿಗಲಿಲ್ಲ ಆ ಆಸಾಮಿ. ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ನೂರಾರು ಕೋಟಿ ರೂಪಾಯಿಅನುದಾನ ಕೊಟ್ಟೆ ಎನ್ನುತ್ತಾರಲ್ಲಾ ಅವರೇನು ಅವರ ಮನೆಯಿಂದ ಕೊಟ್ಟಿದ್ದರಾ? ನಾನು ಮುಖ್ಯಮಂತ್ರಿ ಆಗಿದ್ದಾಗಲೂ ಕೊಟ್ಟಿದ್ದೆ. ಅದು ಜನರ ತೆರಿಗೆಯ ಹಣ’ ಎಂದು ತಿರುಗೇಟು ನೀಡಿದರು.</p>.<p>‘ಸಮ್ಮಿಶ್ರ ಸರ್ಕಾರ ಪತನ ಆಗಬೇಕೆಂದೇ ನಾನು ಅಮೆರಿಕಕ್ಕೆ ಹೋದೆ ಎಂದು ಕುಮಾರಸ್ವಾಮಿಯೇ ಹೇಳಿಕೆ ನೀಡಿದ್ದಾರೆ. ಅದನ್ಯಾರು ಯಾಕೆ ಪ್ರಶ್ನೆ ಮಾಡುವುದಿಲ್ಲ?’ ಎಂದು ಕೇಳಿದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/district/mysore/karnataka-politics-jds-leader-hd-kumaraswamy-targets-congress-leader-siddaramaiah-784631.html" itemprop="url">ಸಿದ್ದರಾಮಯ್ಯ ಕುತಂತ್ರ, ಗೌಡರ ಭಾವನಾತ್ಮಕ ಮಾತಿಗೆ ಕೆಟ್ಟೆ: ಕುಮಾರಸ್ವಾಮಿ </a></p>.<p>‘ಅವರಿಗೆ ಗುಡ್ ವಿಲ್ ಇಲ್ಲ. ಅದಿದ್ದರೆ ಅಲ್ವಾ ಹಾಳಾಗುವ ಪ್ರಶ್ನೆ ಬರುವುದು’ ಎಂದುಪ್ರಶ್ನಿಸಿದರು.</p>.<p>‘ಜೆಡಿಎಸ್–ಕಾಂಗ್ರೆಸ್ ಸರ್ಕಾರದ ಪತನ ಮುಗಿದ ಅಧ್ಯಾಯ. ಆ ಬಗ್ಗೆ ಈಗ ಚರ್ಚಿಸುವ ಅಗತ್ಯವಿಲ್ಲ. ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ತಿಳಿಯಲು ಸತ್ಯ ಶೋಧನಾ ಸಮಿತಿ ರೀತಿಯ ಸಮಿತಿ ರಚಿಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>