ಸುರತ್ಕಲ್ ಟೋಲ್ಗೇಟ್ ಬಳಿ ಭಾನುವಾರ ಸಂಜೆ ವೇಳೆಗೆ, ಬಜರಂಗ ದಳದ ಸ್ಥಳೀಯ ಕಾರ್ಯಕರ್ತರು ವಾಹನ ಅಡ್ಡಗಟ್ಟಿದ್ದಾರೆ. ಹಲ್ಲೆ ನಡೆಸಲು ಮುಂದಾದಾಗ ಸ್ಥಳದಲ್ಲಿ ಇದ್ದ ಮಂಗಳೂರು ಉತ್ತರ ಸಂಚಾರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶರೀಫ್ ಅವರು ತಡೆದಿದ್ದರಿಂದ ವಿದ್ಯಾರ್ಥಿಗಳು ಪಾರಾಗಿದ್ದಾರೆ. ವಾಹನಕ್ಕೆ ಮುತ್ತಿಗೆ ಹಾಕಿದ ಕಾರ್ಯಕರ್ತರು ವಿದ್ಯಾರ್ಥಿಗಳನ್ನು ನಿಂದಿಸುತ್ತಿರುವ ದೃಶ್ಯದ ತುಣುಕು ವೈರಲ್ ಆಗಿರುವ ವಿಡಿಯೊದಲ್ಲಿದೆ.