‘ಈಶ್ವರಪ್ಪ ಅವರು ರಾಜ್ಯಪಾಲರಿಗೆ ನೀಡಿರುವ ಆರೋಪಪಟ್ಟಿಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೂ ಕಳುಹಿಸಿದ್ದಾರೆ. ನಮ್ಮ ಸರ್ಕಾರವನ್ನು ಶೇ 10 ಪರ್ಸೆಂಟ್ ಸರ್ಕಾರ ಎಂದು ಹೀಗಳೆದಿದ್ದ ಪ್ರಧಾನಿಯವರೇ, ನಿಮ್ಮದೇ ಸಚಿವರು ನಿಮ್ಮ ಸರ್ಕಾರದ ಜಾತಕ ಕಳಿಸಿದ್ದಾರೆ. ಪರಿಶೀಲಿಸಿ ನೀವೇ ರೇಟಿಂಗ್ ಕೊಟ್ಟುಬಿಡಿ. ‘ನಾ ಖಾವೂಂಗಾ, ನಾ ಖಾನೆ ದೂಂಗಾ’ ಎಂಬ ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು ‘ಮೈ ಬಿ ಖಾವೂಂಗಾ, ತುಮ್ ಬಿ ಖಾವೋ’ ಎಂಬುದಾಗಿ ಬದಲಿಸಿಬಿಡಿ’ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.