<p><strong>ಬೆಂಗಳೂರು</strong>: ಸಿದ್ದರಾಮಯ್ಯ ಮುಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆಟವೇ ನಡೆಯುತ್ತಿಲ್ಲ ಎಂದು ಬಿಜೆಪಿ ಟೀಕಿಸಿದೆ.</p>.<p>ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಡಿಕೆಶಿ ಅವರೇ ನೀವು ಹೇಳಿದಂತೆಯೇ ಆಗಲಿದೆ. ನೀವು ಊಟ ತಯಾರಿಸಿಡಿ, ಊಟ ಮಾಡಲು ಬೇರೆಯವರು ತುದಿಗಾಲಲ್ಲಿ ನಿಂತಿದ್ದಾರೆ. ಸಿದ್ದರಾಮಯ್ಯ ಅವರೆದುರು ಡಿಕೆಶಿ ಇಷ್ಟೊಂದು ಅಸಹಾಯಕ ಎನಿಸಿಕೊಳ್ಳಬಾರದಿತ್ತು’ ಎಂದು ತಿಳಿಸಿದೆ.</p>.<p>‘ಮೊದಲೆಲ್ಲ, ಕಾಂಗ್ರೆಸ್ ನಾಯಕರ ಕಾರ್ಯಕ್ರಮ ಡಿಕೆಶಿ ಪರವಾಗಿರುತ್ತಿತ್ತು. ಈಗ ಆ ಕಾರ್ಯಕ್ರಮಗಳು ಸಿದ್ದರಾಮಯ್ಯ ಪರವಾಗಿ ರೂಪುಗೊಳ್ಳುತ್ತಿವೆ. ಶಾಸಕರ ಧ್ವನಿಗಳೂ ಸಿದ್ದರಾಮಯ್ಯ ಪರವಾಗಿ ಮೊಳಗುತ್ತಿದೆ. ಮುಂದೆ ಕನಕಪುರದಲ್ಲೂ ಸಿದ್ದರಾಮಯ್ಯ ಹವಾ ಮೂಡಿಸುವರೇ?’ ಎಂದು ಬಿಜೆಪಿ ಪ್ರಶ್ನಿಸಿದೆ.</p>.<p>‘ಪರಿಷತ್ ಟಿಕೆಟ್ ವಿಚಾರದಲ್ಲೂ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವಿನ ಮುನಿಸು ತಾರಕಕ್ಕೇರಿದೆ. ಸಿದ್ದರಾಮಯ್ಯ ಮುಂದೆ ಕೆಪಿಸಿಸಿ ಅಧ್ಯಕ್ಷರ ಆಟವೇ ನಡೆಯುತ್ತಿಲ್ಲ ಎಂಬ ಪರಿಸ್ಥಿತಿ ಕಾಂಗ್ರೆಸ್ ಪಕ್ಷದಲ್ಲಿದೆ. ಡಿಕೆಶಿ ನೀವು ಅಷ್ಟೊಂದು ಅಸಹಾಯಕರೇ?’ ಎಂದು ಬಿಜೆಪಿ ಕೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಿದ್ದರಾಮಯ್ಯ ಮುಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆಟವೇ ನಡೆಯುತ್ತಿಲ್ಲ ಎಂದು ಬಿಜೆಪಿ ಟೀಕಿಸಿದೆ.</p>.<p>ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಡಿಕೆಶಿ ಅವರೇ ನೀವು ಹೇಳಿದಂತೆಯೇ ಆಗಲಿದೆ. ನೀವು ಊಟ ತಯಾರಿಸಿಡಿ, ಊಟ ಮಾಡಲು ಬೇರೆಯವರು ತುದಿಗಾಲಲ್ಲಿ ನಿಂತಿದ್ದಾರೆ. ಸಿದ್ದರಾಮಯ್ಯ ಅವರೆದುರು ಡಿಕೆಶಿ ಇಷ್ಟೊಂದು ಅಸಹಾಯಕ ಎನಿಸಿಕೊಳ್ಳಬಾರದಿತ್ತು’ ಎಂದು ತಿಳಿಸಿದೆ.</p>.<p>‘ಮೊದಲೆಲ್ಲ, ಕಾಂಗ್ರೆಸ್ ನಾಯಕರ ಕಾರ್ಯಕ್ರಮ ಡಿಕೆಶಿ ಪರವಾಗಿರುತ್ತಿತ್ತು. ಈಗ ಆ ಕಾರ್ಯಕ್ರಮಗಳು ಸಿದ್ದರಾಮಯ್ಯ ಪರವಾಗಿ ರೂಪುಗೊಳ್ಳುತ್ತಿವೆ. ಶಾಸಕರ ಧ್ವನಿಗಳೂ ಸಿದ್ದರಾಮಯ್ಯ ಪರವಾಗಿ ಮೊಳಗುತ್ತಿದೆ. ಮುಂದೆ ಕನಕಪುರದಲ್ಲೂ ಸಿದ್ದರಾಮಯ್ಯ ಹವಾ ಮೂಡಿಸುವರೇ?’ ಎಂದು ಬಿಜೆಪಿ ಪ್ರಶ್ನಿಸಿದೆ.</p>.<p>‘ಪರಿಷತ್ ಟಿಕೆಟ್ ವಿಚಾರದಲ್ಲೂ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವಿನ ಮುನಿಸು ತಾರಕಕ್ಕೇರಿದೆ. ಸಿದ್ದರಾಮಯ್ಯ ಮುಂದೆ ಕೆಪಿಸಿಸಿ ಅಧ್ಯಕ್ಷರ ಆಟವೇ ನಡೆಯುತ್ತಿಲ್ಲ ಎಂಬ ಪರಿಸ್ಥಿತಿ ಕಾಂಗ್ರೆಸ್ ಪಕ್ಷದಲ್ಲಿದೆ. ಡಿಕೆಶಿ ನೀವು ಅಷ್ಟೊಂದು ಅಸಹಾಯಕರೇ?’ ಎಂದು ಬಿಜೆಪಿ ಕೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>