ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ ಕಾಂಗ್ರೆಸ್ ನಾಯಕರು ರ್ಯಾಲಿ ನಡೆಸಿ, ಮುಖ್ಯಮಂತ್ರಿಗೆ ನಿವಾಸದ ಕಡೆಗೆ ಕಾಲ್ನಡಿಗೆಯಲ್ಲಿ ಹೊರಟರು. ಭಾರಿ ಸಂಖ್ಯೆಯಲ್ಲಿದ್ದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ರೇಸ್ ಕೋರ್ಸ್ ರಸ್ತೆ ದಾಟಿ ಹೋಗದಂತೆ ಬ್ಯಾರಿಕೇಡ್ಗಳನ್ನು ಅಳವಡಿಸಿ ತಡೆದು ಪೊಲೀಸರು ವಶಕ್ಕೆ ಪಡೆದರು.