ಮೋದಿಯವರು ಪ್ರಧಾನಿಯಾದ ಬಳಿಕ 2015 ರ ಡಿ.15 ರಂದು ನಾರಾಯಣ ಗುರುಗಳ ಸಂಕಲ್ಪ ಕೇಂದ್ರವಾದ ಶಿವಗಿರಿಗೆ ಭೇಟಿ ಕೊಟ್ಟಿದ್ದರು. ‘ಒಂದು ಕಾಲದಲ್ಲಿ ಅಸ್ಪೃಶ್ಯತೆ ತಾಂಡವವಾಡುತ್ತಿದ್ದ ಕೇರಳದಲ್ಲಿ ಮೇಲು– ಕೀಳು, ಜಾತಿ– ಧರ್ಮಗಳ ತಾರತಮ್ಯದ ನೆಲೆವೀಡಾಗಿದ್ದ ನೆಲದಲ್ಲಿ ನಾರಾಯಣ ಗುರುಗಳು ತಂದ ಸಾಮಾಜಿಕ ಪರಿವರ್ತನೆಯಿಂದಾಗಿ ಕೇರಳದಲ್ಲಿ ಸಮಾನತೆ ಬಂದಿದೆ. ನಾರಾಯಣ ಗುರುಗಳ ಆದರ್ಶವು ಜಗತ್ತಿಗೆ ಬೆಳಕು ನೀಡಬಲ್ಲದು’ ಎಂದು ಹೇಳಿ ನಾರಾಯಣ ಗುರುಗಳ ಭಾವಚಿತ್ರ ಅನಾವರಣ ಮಾಡಿದ್ದರು ಎಂದು ಸುನಿಲ್ಕುಮಾರ್ ಹೇಳಿದ್ದಾರೆ.