<p><strong>ಬೆಂಗಳೂರು:</strong> ಶಾಸಕರು, ಸಂಸದರಿಗೆ ನೀಡಲಾಗುವ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ತಲಾ ₹1 ಕೋಟಿಯಂತೆ ಒಟ್ಟು ₹100 ಕೋಟಿ ಬಳಸಿ ಜನರಿಗೆ ಲಸಿಕೆ ವಿತರಿಸಲು ಅವಕಾಶ ಕೊಡಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.</p>.<p>ಕಾಂಗ್ರೆಸ್ ಪ್ರತಿನಿಧಿಸುವ ಶಾಸಕರು, ಸಂಸದರ ಕ್ಷೇತ್ರದ ಅಭಿವೃದ್ಧಿಗೆ ನೀಡಲಾಗುವ ಮೊತ್ತದಲ್ಲಿ ತಲಾ ₹1 ಕೋಟಿಯನ್ನು ಲಸಿಕೆಗಾಗಿ ಬಳಸಿದರೆ ₹90 ಕೋಟಿ ಆಗಲಿದೆ. ಪಕ್ಷದ ವತಿಯಿಂದ ₹10 ಕೋಟಿ ಸಂಗ್ರಹಿಸುತ್ತೇವೆ. ಒಟ್ಟು ಮೊತ್ತದಲ್ಲಿ ಲಸಿಕೆ ಖರೀದಿಸಿ, ಐಸಿಎಂಆರ್ ನಿಗದಿಪಡಿಸಿರುವ ನಿಯಮಗಳಂತೆ ಲಸಿಕೆ ನೀಡುತ್ತೇವೆ. ಇದಕ್ಕೆ ಅವಕಾಶ ಹಾಗೂ ಅನುಮೋದನೆ ನೀಡಬೇಕು’ ಎಂದು ಪತ್ರದಲ್ಲಿ ಕೋರಿದ್ದಾರೆ.</p>.<p>‘ಲಸಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ಯಾಮಾರಿದೆ. ಸರ್ಕಾರ ತಪ್ಪು ಮಾಡಿದೆ ಎಂದು ಹೇಳಿದರೆ ಬಿಜೆಪಿಯ ಹಲವು ಮುಖಂಡರು ಜನರನ್ನು, ವಿರೋಧ ಪಕ್ಷಗಳನ್ನು ನಿಂದಿಸುತ್ತಾ ಕುಳಿತಿದ್ದಾರೆ. ಸರ್ಕಾರದ ಸ್ವಯಂಕೃತ ಅಪರಾಧದಿದಾಗಿ ಕತ್ತಲು ಆವರಿಸಿದೆ. ಈ ಹೊತ್ತಿನಲ್ಲಿ ಜವಾಬ್ಧಾರಿಯುತ ಪ್ರತಿ ಪಕ್ಷವಾದ ನಾವು ಸುಮ್ಮನೇ ಕೈಕಟ್ಟಿ ಕೂರಲಾಗದು. ಈ ಕಾರಣಕ್ಕಾಗಿ ಲಸಿಕೆ ಯೋಜನೆ ಆರಂಭಿಸಲು ಮುಂದಾಗಿದ್ದೇವೆ’ ಎಂದು ಹೇಳಿದ್ದಾರೆ.</p>.<p>‘ವಿರೋಧ ಪಕ್ಷಗಳನ್ನು ಟೀಕಿಸುವ ಬಿಜೆಪಿ ಮುಖಂಡರು ಹಾಗೂ ಸ್ವತಃ ಪ್ರಧಾನಮಂತ್ರಿಗಳು, ‘ನಾವು ಕೊರೊನಾ ವಿರುದ್ಧದ ಯುದ್ಧ ಗೆದ್ದು ಬಿಟ್ಟಿದ್ದೇವೆ’ ಎಂದು ನಾಲ್ಕು ತಿಂಗಳ ಹಿಂದೆ ಹೇಳಿದ್ದರು. ಈ ಮಾತುನಂಬಿದ ಜನರು, ದುಡಿಮೆಯಲ್ಲಿ ತೊಡಗಿಕೊಂಡರು. ಆಗಲೇ ಕೊರೊನಾದ ಎರಡನೇ ಅಲೆ ಬಂದು ಅಪ್ಪಳಿಸಿತು. ಅಸಂಖ್ಯಾತ ಜನರು ಮೃತಪಟ್ಟರು. ಈ ಸಾವುಗಳನ್ನು ಆಡಳಿತ ನಡೆಸುತ್ತಿರುವ ಸರ್ಕಾರಗಳೇ ಮಾಡಿದ ಕೊಲೆ ಎಂದರೆ ತಪ್ಪೇನು? ತಜ್ಞರು ನೀಡಿದ ಎಚ್ಚರಿಕೆ, ಸಲಹೆಗಳನ್ನು ಕಸದ ಬುಟ್ಟಿಗೆ ಎಸೆದು ಜನರನ್ನು ಕೊಂದವರೇ ಹೊರಬೇಕಲ್ಲವೇ?’ ಎಂದೂ ಅವರು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶಾಸಕರು, ಸಂಸದರಿಗೆ ನೀಡಲಾಗುವ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ತಲಾ ₹1 ಕೋಟಿಯಂತೆ ಒಟ್ಟು ₹100 ಕೋಟಿ ಬಳಸಿ ಜನರಿಗೆ ಲಸಿಕೆ ವಿತರಿಸಲು ಅವಕಾಶ ಕೊಡಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.</p>.<p>ಕಾಂಗ್ರೆಸ್ ಪ್ರತಿನಿಧಿಸುವ ಶಾಸಕರು, ಸಂಸದರ ಕ್ಷೇತ್ರದ ಅಭಿವೃದ್ಧಿಗೆ ನೀಡಲಾಗುವ ಮೊತ್ತದಲ್ಲಿ ತಲಾ ₹1 ಕೋಟಿಯನ್ನು ಲಸಿಕೆಗಾಗಿ ಬಳಸಿದರೆ ₹90 ಕೋಟಿ ಆಗಲಿದೆ. ಪಕ್ಷದ ವತಿಯಿಂದ ₹10 ಕೋಟಿ ಸಂಗ್ರಹಿಸುತ್ತೇವೆ. ಒಟ್ಟು ಮೊತ್ತದಲ್ಲಿ ಲಸಿಕೆ ಖರೀದಿಸಿ, ಐಸಿಎಂಆರ್ ನಿಗದಿಪಡಿಸಿರುವ ನಿಯಮಗಳಂತೆ ಲಸಿಕೆ ನೀಡುತ್ತೇವೆ. ಇದಕ್ಕೆ ಅವಕಾಶ ಹಾಗೂ ಅನುಮೋದನೆ ನೀಡಬೇಕು’ ಎಂದು ಪತ್ರದಲ್ಲಿ ಕೋರಿದ್ದಾರೆ.</p>.<p>‘ಲಸಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ಯಾಮಾರಿದೆ. ಸರ್ಕಾರ ತಪ್ಪು ಮಾಡಿದೆ ಎಂದು ಹೇಳಿದರೆ ಬಿಜೆಪಿಯ ಹಲವು ಮುಖಂಡರು ಜನರನ್ನು, ವಿರೋಧ ಪಕ್ಷಗಳನ್ನು ನಿಂದಿಸುತ್ತಾ ಕುಳಿತಿದ್ದಾರೆ. ಸರ್ಕಾರದ ಸ್ವಯಂಕೃತ ಅಪರಾಧದಿದಾಗಿ ಕತ್ತಲು ಆವರಿಸಿದೆ. ಈ ಹೊತ್ತಿನಲ್ಲಿ ಜವಾಬ್ಧಾರಿಯುತ ಪ್ರತಿ ಪಕ್ಷವಾದ ನಾವು ಸುಮ್ಮನೇ ಕೈಕಟ್ಟಿ ಕೂರಲಾಗದು. ಈ ಕಾರಣಕ್ಕಾಗಿ ಲಸಿಕೆ ಯೋಜನೆ ಆರಂಭಿಸಲು ಮುಂದಾಗಿದ್ದೇವೆ’ ಎಂದು ಹೇಳಿದ್ದಾರೆ.</p>.<p>‘ವಿರೋಧ ಪಕ್ಷಗಳನ್ನು ಟೀಕಿಸುವ ಬಿಜೆಪಿ ಮುಖಂಡರು ಹಾಗೂ ಸ್ವತಃ ಪ್ರಧಾನಮಂತ್ರಿಗಳು, ‘ನಾವು ಕೊರೊನಾ ವಿರುದ್ಧದ ಯುದ್ಧ ಗೆದ್ದು ಬಿಟ್ಟಿದ್ದೇವೆ’ ಎಂದು ನಾಲ್ಕು ತಿಂಗಳ ಹಿಂದೆ ಹೇಳಿದ್ದರು. ಈ ಮಾತುನಂಬಿದ ಜನರು, ದುಡಿಮೆಯಲ್ಲಿ ತೊಡಗಿಕೊಂಡರು. ಆಗಲೇ ಕೊರೊನಾದ ಎರಡನೇ ಅಲೆ ಬಂದು ಅಪ್ಪಳಿಸಿತು. ಅಸಂಖ್ಯಾತ ಜನರು ಮೃತಪಟ್ಟರು. ಈ ಸಾವುಗಳನ್ನು ಆಡಳಿತ ನಡೆಸುತ್ತಿರುವ ಸರ್ಕಾರಗಳೇ ಮಾಡಿದ ಕೊಲೆ ಎಂದರೆ ತಪ್ಪೇನು? ತಜ್ಞರು ನೀಡಿದ ಎಚ್ಚರಿಕೆ, ಸಲಹೆಗಳನ್ನು ಕಸದ ಬುಟ್ಟಿಗೆ ಎಸೆದು ಜನರನ್ನು ಕೊಂದವರೇ ಹೊರಬೇಕಲ್ಲವೇ?’ ಎಂದೂ ಅವರು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>