ಕಾರ್ಮಿಕರು ಶಾಂತಿಯುತವಾಗಿ ಹೋರಾಟ ನಡೆಸುತ್ತಿರುವ ಸ್ಥಳಕ್ಕೆ ಸರ್ಕಾರದ ಯಾವುದೇ ಪ್ರತಿನಿಧಿ ಭೇಟಿ ನೀಡಿ, ಸಮಸ್ಯೆ ಪರಿಹರಿಸಲು ಯತ್ನಿಸಿಲ್ಲ. ಆದರೆ, ಅದೇ ಕಾರ್ಮಿಕರು ಸಿಟ್ಟಿಗೆದ್ದು ತೀವ್ರ ಸ್ವರೂಪದ ಹೋರಾಟಕ್ಕೆ ಇಳಿದಾಗ ಅವರನ್ನು ಕಳ್ಳರು, ದರೋಡೆಕೋರರು, ದಾಂದಲೆಕೋರರು ಎಂದು ಬಿಂಬಿಸಲು ಯತ್ನಿಸುತ್ತಿರುವುದು ಸರಿಯಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ಕಾನೂನುಗಳೇ ಈಗಿನ ಬಿಕ್ಕಟ್ಟಿಗೆ ಕಾರಣ. ಈ ಸಂದರ್ಭದಲ್ಲಿ ಸರ್ಕಾರ ನಿಷ್ಕ್ರಿಯವಾಗಿ ಕೈಕಟ್ಟಿ ಕುಳಿತುಕೊಳ್ಳಬಾರದು. ತಕ್ಷಣವೇ ಆಡಳಿತ ಮಂಡಳಿಗಳು ಮತ್ತು ನೌಕರರ ನಡುವೆ ಮಾತುಕತೆ ನಡೆಸಿ ಸಮಸ್ಯೆಗೆ ಪರಿಹಾರ ಒದಗಿಬೇಕು ಎಂದು ಒತ್ತಾಯಿಸಿದ್ದಾರೆ.