<figcaption>""</figcaption>.<p><strong>ಮಂಗಳೂರು</strong>: ಅಯ್ಯೋ ಸಿದ್ದರಾಮಯ್ಯನವರೇ, ಹಿಂದುಗಳಿಗೆ ನಿಮ್ಮ ನಿಜ ಬಣ್ಣದ ಅರಿವಿದೆ ಎಂದು ಟ್ವೀಟ್ ಮಾಡುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾಜಿ ಮುಖ್ಯಮಂತ್ರಿಗಳನ್ನು ಕುಟುಕಿದ್ದಾರೆ.</p>.<p>‘ಬುದ್ದಿವಂತರ ಜಿಲ್ಲೆ ಎಂಬ ದಕ್ಷಿಣ ಕನ್ನಡದ ಖ್ಯಾತಿಗೆ ಅಸೂಯೆ ಪಟ್ಟು ಬಿಜೆಪಿ ವರಿಷ್ಠರು ನಳಿನ್ ಕುಮಾರ್ ಕಟೀಲ್ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರಬಹುದು. ಇಲ್ಲವೇ ಆ ಪಕ್ಷದಲ್ಲಿ ಈ ಮಟ್ಟದ ಬೌದ್ಧಿಕ ದಾರಿದ್ರ್ಯ ಇದ್ದಿರಬಹುದು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶುಕ್ರವಾರ ಟ್ವೀಟ್ ಮಾಡಿದ್ದರು.</p>.<p>ಸಿದ್ದರಾಮಯ್ಯ ಹೇಳಿಕೆಗೆ ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿರುವ ಕಟೀಲ್, 'ಅಯ್ಯೋ ಸಿದ್ದರಾಮಯ್ಯನವರೇ, ಹಿಂದುಗಳಿಗೆ ನಿಮ್ಮ ನಿಜ ಬಣ್ಣದ ಅರಿವಿದೆ. ಎಸ್ಡಿಪಿಐ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆದವರು ಯಾರು ಎಂಬುದು ಹಿಂದುಗಳು ಮರೆತಿಲ್ಲ. ನೀವು ಜಾತಿ- ಧರ್ಮಗಳ ಹೆಸರಿನಲ್ಲಿ ಜನರನ್ನು ಒಡೆದು ಆಳಲು ಪ್ರಯತ್ನಿಸಿದ್ದು ಗುಟ್ಟಾಗೇನೂ ಉಳಿದಿಲ್ಲ' ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಮಂಗಳೂರು</strong>: ಅಯ್ಯೋ ಸಿದ್ದರಾಮಯ್ಯನವರೇ, ಹಿಂದುಗಳಿಗೆ ನಿಮ್ಮ ನಿಜ ಬಣ್ಣದ ಅರಿವಿದೆ ಎಂದು ಟ್ವೀಟ್ ಮಾಡುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾಜಿ ಮುಖ್ಯಮಂತ್ರಿಗಳನ್ನು ಕುಟುಕಿದ್ದಾರೆ.</p>.<p>‘ಬುದ್ದಿವಂತರ ಜಿಲ್ಲೆ ಎಂಬ ದಕ್ಷಿಣ ಕನ್ನಡದ ಖ್ಯಾತಿಗೆ ಅಸೂಯೆ ಪಟ್ಟು ಬಿಜೆಪಿ ವರಿಷ್ಠರು ನಳಿನ್ ಕುಮಾರ್ ಕಟೀಲ್ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರಬಹುದು. ಇಲ್ಲವೇ ಆ ಪಕ್ಷದಲ್ಲಿ ಈ ಮಟ್ಟದ ಬೌದ್ಧಿಕ ದಾರಿದ್ರ್ಯ ಇದ್ದಿರಬಹುದು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶುಕ್ರವಾರ ಟ್ವೀಟ್ ಮಾಡಿದ್ದರು.</p>.<p>ಸಿದ್ದರಾಮಯ್ಯ ಹೇಳಿಕೆಗೆ ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿರುವ ಕಟೀಲ್, 'ಅಯ್ಯೋ ಸಿದ್ದರಾಮಯ್ಯನವರೇ, ಹಿಂದುಗಳಿಗೆ ನಿಮ್ಮ ನಿಜ ಬಣ್ಣದ ಅರಿವಿದೆ. ಎಸ್ಡಿಪಿಐ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆದವರು ಯಾರು ಎಂಬುದು ಹಿಂದುಗಳು ಮರೆತಿಲ್ಲ. ನೀವು ಜಾತಿ- ಧರ್ಮಗಳ ಹೆಸರಿನಲ್ಲಿ ಜನರನ್ನು ಒಡೆದು ಆಳಲು ಪ್ರಯತ್ನಿಸಿದ್ದು ಗುಟ್ಟಾಗೇನೂ ಉಳಿದಿಲ್ಲ' ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>