ಸಿದ್ದರಾಮಯ್ಯ ಹೇಳಿಕೆ ಕುರಿತು ಟ್ವಿಟರ್ನಲ್ಲಿ ಸೋಮವಾರ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ‘ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿ ಕಣಕ್ಕಿಳಿಸಿದ್ದರಿಂದ ಕಾಂಗ್ರೆಸ್ ಸೋತಿದೆ ಎಂದಿದ್ದೀರಿ. ನಿಮಗೆ ಅಲ್ಪಸಂಖ್ಯಾತರ ಮೇಲೆ ಕೋಪವೊ? ಜೆಡಿಎಸ್ ಮೇಲೆ ಅಸಮಾಧಾನವೊ ಅರ್ಥವಾಗುತ್ತಿಲ್ಲ. ನೀವು ಯಾವ ಅಲ್ಪಸಂಖ್ಯಾತ ನಾಯಕರನ್ನೂ ಬೆಳೆಸಿದ ನಿದರ್ಶನ ಇಲ್ಲ’ ಎಂದು ತಿರುಗೇಟು ನೀಡಿದ್ದಾರೆ.