‘ಕಾಂಗ್ರೆಸ್ನಲ್ಲಿ ನಾಯಕತ್ವದ ಬಿಕ್ಕಟ್ಟು ಇದೆ. ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ, ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್ ಅವರಾಗುತ್ತಾರಾ ಎಂಬ ಬಗ್ಗೆ ಚರ್ಚೆ ನಡೆಯುವಾಗ, ಅವರನ್ನೆಲ್ಲ ಮೀರಿ ನಾನಿದ್ದೇನೆ ಎಂದು ತೋರಿಸುವುದಕ್ಕೆ ಸಿದ್ದರಾಮಯ್ಯ ಅವರು ಈ ರೀತಿ ಮಾತನಾಡುತ್ತಾರೆ. ಹಾಗಾಗಿ ಇಂತಹ ವಿಚಾರಗಳು ಚರ್ಚೆಗೆ ಬರುತ್ತವೆ’ ಎಂದರು.