ಸಿದ್ದರಾಮಯ್ಯ ಒಂದು ಜಾತಿಗೆ ಸೀಮಿತವಲ್ಲ: ಕಾಗಿನೆಲೆಶ್ರೀ

ಹರಿಹರ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಹಿಂದ ನಾಯಕ. ಅವರು ಒಂದು ಜಾತಿಗೆ ಸೀಮಿತವಲ್ಲ ಎಂದು ಕಾಗಿನೆಲೆಯ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.
ಪಾದಯಾತ್ರೆ ಮುಗಿಸಿ ಬೆಳ್ಳೂಡಿ ಕನಕ ಗುರುಪೀಠದ ಶಾಖಾ ಮಠಕ್ಕೆ ಬುಧವಾರ ಮರಳಿದ ಸ್ವಾಮೀಜಿ ಅವರನ್ನು ಬೈಕ್ ರ್ಯಾಲಿ ಮೂಲಕ ಭಕ್ತರು ಸ್ವಾಗತಿಸಿದಾಗ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಸಿದ್ದರಾಮಯ್ಯ ಅವರಿಗೆ ಅವರದ್ದೇ ಆದ ಸೈದ್ಧಾಂತಿಕ ನಿಲುವುಗಳಿವೆ. ಅವರನ್ನು ಒಂದು ಜಾತಿಗೆ ಸೀಮಿತ ಮಾಡುವುದು ಬೇಡ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.