ಸಿದ್ದರಾಮಯ್ಯ ಉಂಡಮನೆಯ ಜಂತಿ ಎಣಿಸುವ ಜಾಯಮಾನದವರೆಂದು ದೇವೇಗೌಡರು ಈ ಹಿಂದೆ ಆರೋಪಿಸಿದ್ದರು. ಅದು ಈಗ ನಿಜವಾಗುತ್ತಿದೆ.
ರಾಜಕೀಯ ಪುನರ್ಜನ್ಮ ನೀಡಿದ ಬಾದಾಮಿಯಿಂದ ಪಲಾಯನ ಮಾಡುವುದಕ್ಕೆ ಸಿದ್ದರಾಮಯ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.@siddaramaiah ಅವರೇ, ನೀವೆಷ್ಟು ಕೃತಘ್ನರು ಎಂಬುದೀಗ ಮನದಟ್ಟಾಗುತ್ತಿದೆ.
ರಾಜಕೀಯ ಜೀವನ ಮುಗಿದೇ ಹೋಯಿತು ಎನ್ನುವಾಗ @siddaramaiah ಅವರ ಕೈ ಹಿಡಿದದ್ದು ಬಾದಾಮಿ ಕ್ಷೇತ್ರದ ಜನತೆ.
ಆದರೆ, ಕೈ ಹಿಡಿದ ಜನರಿಗೆ ಸಂಕಟದ ಸಂದರ್ಭದಲ್ಲಿ ಅನ್ಯಾಯ ಮಾಡಿದರು. ಕ್ಷೇತ್ರದ ಜನತೆ ಕೋವಿಡ್ನಿಂದ ಕಂಗೆಟ್ಟಿರುವಾಗ ಮತ್ತೊಂದು ವಲಸೆಗೆ ಲೆಕ್ಕ ಹಾಕುತ್ತಾ ಕುಳಿತಿರುವುದು ಬಾದಾಮಿ ಜನತೆಗೆ ಮಾಡಿರುವ ಅವಮಾನ.