ಬೆಂಗಳೂರು: ನಮ್ಮ ಪಕ್ಷದ ಅಭ್ಯರ್ಥಿ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗಳೆದಿದ್ದಾರೆ. ಹಾಗಾದರೆ, ಬಿ.ಎಸ್ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬಿಜೆಪಿ ವಿರುದ್ಧ ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, 'ನಿನ್ನೆ(ಮಂಗಳವಾರ) ನಾನು ಯಶವಂತಪುರ ಸಮೀಪ ಚುನಾವಣಾ ಪ್ರಚಾರ ಭಾಷಣ ಮಾಡುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಭಾಷಣಕ್ಕೆ ಅಡ್ಡಿಪಡಿಸಿದ್ದರಲ್ಲದೆ, ನಾನು ವಾಪಾಸು ತೆರಳುವಾಗ ವಾಹನ ಅಡ್ಡಗಟ್ಟಿ ಬೆದರಿಸುವ ಪ್ರಯತ್ನ ಮಾಡಿದ್ದರು. ಇದು ಬಿಜೆಪಿಯವರ ರಾಜಕಾರಣದ ಇನ್ನೊಂದು ಮುಖವನ್ನು ಅನಾವರಣಗೊಳಿಸಿದೆ' ಎಂದು ವಾಗ್ದಾಳಿ ನಡೆಸಿದ್ದಾರೆ.
'ಆರ್.ಆರ್ ನಗರದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿದ್ದ ಮುನಿರತ್ನ ಅವರೆ ಅಲ್ಲಿನ ಕಾನೂನು ಬಾಹಿರ ಚಟುವಟಿಕೆಗಳಿಗೆ, ಗೂಂಡಾಗಿರಿಗೆ ಮೂಲ ಕಾರಣ. ಸೋಲಿನ ಭಯದಿಂದ ಜಿ.ಕೆ. ವೆಂಕಟೇಶ್ ಅಂಥವರನ್ನು ಮುಂದೆ ಬಿಟ್ಟು ಮುನಿರತ್ನ ಅವರೆ ಗಲಭೆ ಎಬ್ಬಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಅನುಮಾನವಿದೆ' ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ನಮ್ಮ ಪಕ್ಷದ ಅಭ್ಯರ್ಥಿ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗಳೆದಿದ್ದಾರೆ. ಹಾಗಾದರೆ, ಬಿ.ಎಸ್ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯ, 'ಚುನಾವಣೆಯನ್ನು ಸಾಧನೆ ಮತ್ತು ಸಿದ್ಧಾಂತದ ಮೂಲಕ ಎದುರಿಸಲಾಗದವರು ಮಾತ್ರ ಸೋಲಿನ ಭೀತಿಯಿಂದ ಈ ರೀತಿ ಚಾರಿತ್ರ್ಯಹರಣ, ಗೂಂಡಾಗಿರಿ, ಹಣ ಹಂಚುವುದು ಮೊದಲಾದ ಅಡ್ಡದಾರಿ ಹಿಡಿಯುವುದು' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿನ್ನೆ ನಾನು ಯಶವಂತಪುರ ಸಮೀಪ ಚುನಾವಣಾ ಪ್ರಚಾರ ಭಾಷಣ ಮಾಡುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಭಾಷಣಕ್ಕೆ ಅಡ್ಡಿಪಡಿಸಿದ್ದರಲ್ಲದೆ, ನಾನು ವಾಪಾಸು ತೆರಳುವಾಗ ವಾಹನ ಅಡ್ಡಗಟ್ಟಿ ಬೆದರಿಸುವ ಪ್ರಯತ್ನ ಮಾಡಿದ್ದರು. ಇದು ಬಿಜೆಪಿಯವರ ರಾಜಕಾರಣದ ಇನ್ನೊಂದು ಮುಖವನ್ನು ಅನಾವರಣಗೊಳಿಸಿದೆ. 1/5#Bypolls
— Siddaramaiah (@siddaramaiah) October 28, 2020
ಆರ್.ಆರ್ ನಗರದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿದ್ದ ಮುನಿರತ್ನ ಅವರೆ ಅಲ್ಲಿನ ಕಾನೂನು ಬಾಹಿರ ಚಟುವಟಿಕೆಗಳಿಗೆ, ಗೂಂಡಾಗಿರಿಗೆ ಮೂಲ ಕಾರಣ. ಸೋಲಿನ ಭಯದಿಂದ ಜಿ.ಕೆ ವೆಂಕಟೇಶ್ ಅಂಥವರನ್ನು ಮುಂದೆ ಬಿಟ್ಟು ಮುನಿರತ್ನ ಅವರೆ ಗಲಭೆ ಎಬ್ಬಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಅನುಮಾನವಿದೆ. 2/5#Bypolls
— Siddaramaiah (@siddaramaiah) October 28, 2020
ಚುನಾವಣೆಯನ್ನು ಸಾಧನೆ ಮತ್ತು ಸಿದ್ಧಾಂತದ ಮೂಲಕ ಎದುರಿಸಲಾಗದವರು ಮಾತ್ರ ಸೋಲಿನ ಭೀತಿಯಿಂದ ಈ ರೀತಿ ಚಾರಿತ್ರ್ಯಹರಣ, ಗೂಂಡಾಗಿರಿ, ಹಣ ಹಂಚುವುದು ಮೊದಲಾದ ಅಡ್ಡದಾರಿ ಹಿಡಿಯುವುದು. 4/5#Bypolls
— Siddaramaiah (@siddaramaiah) October 28, 2020
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.