ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ತವರು ಸಿದ್ದರಾಮನಹುಂಡಿಯ ರಾಮ ಮಂದಿರ ಉದ್ಘಾಟನೆ ಸೋಮವಾರ

Last Updated 18 ಏಪ್ರಿಲ್ 2021, 16:18 IST
ಅಕ್ಷರ ಗಾತ್ರ

ಮೈಸೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಸೋಮವಾರ (ಏ.19) ‘ಕೋದಂಡರಾಮ ಮಂದಿರ’ದ ಉದ್ಘಾಟನೆ ನಡೆಯಲಿದೆ.

ಸುಮಾರು ನೂರು ವರ್ಷದಷ್ಟು ಹಳೆಯದಾದ ಈ ಮಂದಿರವನ್ನು ಸಿದ್ದರಾಮಯ್ಯ ಅವರ ಕುಟುಂಬದವರು ಗ್ರಾಮಸ್ಥರೊಂದಿಗೆ ಸೇರಿ ಜೀರ್ಣೋದ್ಧಾರ ಮಾಡಿದ್ದಾರೆ.

‘ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿ
ರುವ ಕಾರಣ ಸಿದ್ದರಾಮಯ್ಯ ಅವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಗ್ರಾಮಸ್ಥರೇ ಸರಳವಾಗಿ ದೇಗುಲ ಉದ್ಘಾಟಿಸಲಿದ್ದಾರೆ. ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ
ಹಾಗೂ ಇವರ ತಾಯಿ ಪಾರ್ವತಮ್ಮ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT