ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮತಗಳೇನು ಬಿಎಸ್‌ವೈ ಜೇಬಿನಲ್ಲಿವೆಯೇ?’–ಸಿದ್ದರಾಮಯ್ಯ

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಸತೀಶ್‌ ಜಾರಕಿಹೊಳಿ
Last Updated 20 ಮಾರ್ಚ್ 2021, 21:25 IST
ಅಕ್ಷರ ಗಾತ್ರ

ಮೈಸೂರು: ‘ಮತಗಳೇನು ಯಡಿಯೂರಪ್ಪನ ಜೇಬಿನಲ್ಲಿವೆಯೇ? ಚುನಾವಣೆಯಲ್ಲಿ ಜನರ ಆಶೀರ್ವಾದವೇ ಅಂತಿಮ. ಉಪಚುನಾವಣೆಯಲ್ಲೂ ಜನ ಸರಿಯಾದ ಉತ್ತರ ನೀಡಲಿದ್ದಾರೆ‌’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶನಿವಾರ ಇಲ್ಲಿ ಹೇಳಿದರು.

‌ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಾಗಿ ಯಡಿಯೂರಪ್ಪ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಅವರು, ‘ಬಿಜೆಪಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ. ಪ್ರತಾಪಗೌಡ ಪಾಟೀಲ ನಮ್ಮ ಪಕ್ಷ ಬಿಟ್ಟು ಹೋದವನು. ಆಪರೇಷನ್‌ ಕಮಲಕ್ಕೆ ಒಳಗಾಗಿರುವ ಆತನಿಗೆ ಇಮೇಜ್‌ ಇಲ್ಲ. ಇದು ಕಾಂಗ್ರೆಸ್‌ಗೆ ಅನುಕೂಲ’ ಎಂದರು.

‘ಉಪಚುನಾವಣೆಗೆ ಕಾಂಗ್ರೆಸ್‌ ಸಿದ್ಧತೆ ಮಾಡಿಕೊಂಡಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸತೀಶ್‌ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಲು ಶಿಫಾರಸು ಮಾಡಿದ್ದೇವೆ. ಅವರ ಹೆಸರು ಅಂತಿಮವಾಗುವ ನಿರೀಕ್ಷೆ ಇದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT