ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಾಗಿ ಯಡಿಯೂರಪ್ಪ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಅವರು, ‘ಬಿಜೆಪಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ. ಪ್ರತಾಪಗೌಡ ಪಾಟೀಲ ನಮ್ಮ ಪಕ್ಷ ಬಿಟ್ಟು ಹೋದವನು. ಆಪರೇಷನ್ ಕಮಲಕ್ಕೆ ಒಳಗಾಗಿರುವ ಆತನಿಗೆ ಇಮೇಜ್ ಇಲ್ಲ. ಇದು ಕಾಂಗ್ರೆಸ್ಗೆ ಅನುಕೂಲ’ ಎಂದರು.