‘ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ರಾಜ್ಯಗಳ ಅಧಿಕಾರಗಳನ್ನು ಮೊಟಕುಗೊಳಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಮೋದಿಯವರ ಈ ಸರ್ವಾಧಿಕಾರಿ ಧೋರಣೆ ಒಕ್ಕೂಟ ವ್ಯವಸ್ಥೆಗೆ ವಿರೋಧವಾದುದು. ಈಗಾಗಲೇ ಆರು ರಾಜ್ಯಗಳು ಈ ಪ್ರಸ್ತಾವವನ್ನು ವಿರೋಧಿಸಿವೆ. ರಾಜ್ಯ ಸರ್ಕಾರವೂ ಈ ವಿಚಾರದಲ್ಲಿ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ತಿಳಿ ಹೇಳಬೇಕು. ವಿರೋಧ ಪಕ್ಷಗಳ ಮುಖಂಡರ ಸಭೆ ಕರೆದು, ಚರ್ಚಿಸಿದ ಬಳಿಕ ರಾಜ್ಯದ ವಿರೋಧವನ್ನು ದಾಖಲಿಸಿ’ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.