‘ಅಡುಗೆ ಅನಿಲ, ಖಾದ್ಯ ತೈಲದ ಬೆಲೆ ಏರಿಕೆ ಆಗಿದ್ದರಿಂದ ತಿಂಡಿಗಳ ಬೆಲೆ ಜಾಸ್ತಿ ಆಗಿದೆ’ ಎಂದು ಸಿದ್ದರಾಮಯ್ಯ ವಿವರಿಸುತ್ತಿದ್ದಾಗ, ಗೃಹ ಸಚಿವ ಆರಗ ಜ್ಞಾನೇಂದ್ರ ಮಧ್ಯ ಪ್ರವೇಶಿಸಿ, ‘ಕೇವಲ ಅದೇ ಕಾರಣಗಳಿಗೆ ಬೆಲೆ ಜಾಸ್ತಿ ಆಗಿಲ್ಲ, ಅಕ್ಕಿ ಬೆಲೆಯೂ ಹೆಚ್ಚಾಗಿದೆ. ಅಕ್ಕಿ ಬೆಲೆ ಹೆಚ್ಚಾಗಿದ್ದರಿಂದ ರೈತರಿಗೆ ಒಳ್ಳೆ ದರ ಸಿಗುತ್ತಿದೆ’ ಎಂದರು.