'ಬಿಜೆಪಿ ಹುಟ್ಟಿನಿಂದಲೇ ರೈತ ವಿರೋಧಿ. ಅದು ಬಂಡವಾಳಿಗರು, ಉದ್ಯಮಿಗಳು ಮತ್ತು ವರ್ತಕರ ಪಕ್ಷ. ಈ ಪಕ್ಷದ ಡಿಎನ್ಎನಲ್ಲಿಯೇ ರೈತ ವಿರೋಧಿ ವಿಷ ಇದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕಾವೇರಿ- ಕೃಷ್ಣಾ ನದಿನೀರು ಹಂಚಿಕೆಯಲ್ಲಿ ದ್ರೋಹ ಎಸಗಿತು, ಮಹದಾಯಿ, ಮೇಕೆದಾಟು ಯೋಜನೆಗಳಲ್ಲಿ ಮೋಸ ಮಾಡಿದೆ, ಬೀಜ-ರಸಗೊಬ್ಬರ ಪೂರೈಕೆ ಮಾಡದೆ ರೈತರನ್ನು ಗೋಳು ಹೊಯ್ಕೊಳ್ಳುತ್ತಾ ಇದೆ. ಬಿಜೆಪಿಗೆ ಯಾಕೆ ರೈತರ ಮೇಲೆ ಇಷ್ಟೊಂದು ದ್ವೇಷ, ಕರ್ನಾಟಕದ ಬಗ್ಗೆ ಯಾಕೆ ಸೇಡಿನ ಭಾವನೆ ಎನ್ನುವ ಪ್ರಶ್ನೆಗೆ ರಾಜ್ಯದ ಜನತೆಗೆ ಈಗ ಉತ್ತರ ಸಿಕ್ಕಿದೆ' ಎಂದಿದ್ದಾರೆ.