ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಅವರು, ‘ಬಿಟ್ ಕಾಯಿನ್ ಹಗರಣದ ಬಗ್ಗೆರಾಜ್ಯದ ತನಿಖಾ ಸಂಸ್ಥೆಗಳು ಸಮಗ್ರ ತನಿಖೆ ನಡೆಸಿವೆ. ಆದರೂ ಸರ್ಕಾರವೇ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಬಿಐಗೆ ಇದೇ ಪ್ರಕರಣದತನಿಖೆಯ ಹೊಣೆಯನ್ನು ವಹಿಸಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಸಮಗ್ರ ತನಿಖೆ ನಡೆಸಿದ್ದರೆ ಹೆಚ್ಚಿನ ತನಿಖೆಗೆ ಇಡಿ ಮತ್ತು ಸಿಬಿಐಗೆ ಒಪ್ಪಿಸುವ ಅನಿವಾರ್ಯತೆ ಯಾಕೆ ಬಂತು?’ ಎಂದು ಪ್ರಶ್ನಿಸಿದ್ದಾರೆ.