ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರು ನೀಡಿದ ತೀರ್ಪನ್ನು ಒಪ್ಪಿಕೊಂಡಿದ್ದೇವೆ: ಸಿದ್ದರಾಮಯ್ಯ

ಸೋಲಿನ ಹೊಣೆ ಡಿಕೆಶಿ ಹೊರಬೇಕಿಲ್ಲ
Last Updated 10 ನವೆಂಬರ್ 2020, 21:58 IST
ಅಕ್ಷರ ಗಾತ್ರ

ಬಾಗಲಕೋಟೆ: ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪು ಒಪ್ಪಿಕೊಳ್ಳಬೇಕಾಗುತ್ತದೆ. ನಾವು ಒಪ್ಪಿಕೊಂಡಿದ್ದೇವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಬಾದಾಮಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರದಲ್ಲಿರೋರು ಚುನಾವಣೆಯನ್ನು ನಿಷ್ಪಕ್ಷಪಾತ ಹಾಗೂ ಮುಕ್ತವಾಗಿ ನಡೆಸುವ ಜವಾಬ್ದಾರಿ ಹೊಂದಿ ರುತ್ತಾರೆ. ಆದರೆ ನನಗೆ ಇರುವ ಮಾಹಿತಿ ಪ್ರಕಾರ ಬಿಜೆಪಿ ಅಧಿಕಾರ ದುರುಪಯೋಗಪಡಿಸಿಕೊಂಡಿದೆ’ ಎಂದು ಆರೋಪಿಸಿದರು.

2023ಕ್ಕೆ ವಿಧಾನಸಭಾ ಚುನಾವಣೆ ಬರುತ್ತೆ. ಅಲ್ಲಿ ಗೆದ್ದೇ ಗೆಲ್ಲುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಉಪ ಚುನಾವಣೆ ಬಳಿಕ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದು ನೀಡಿದ್ದ ಹೇಳಿಕೆ ಪುನರುಚ್ಚರಿಸಿದ ಸಿದ್ದರಾಮಯ್ಯ, ‘ಈಗಲೂ ನನ್ನ ಹೇಳಿಕೆಗೆ ಬದ್ಧನಿದ್ದೇನೆ. ನನಗೆ ತಿಳಿದಂತೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿತಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT