‘ಎನ್ಇಪಿಯನ್ನು ಸಂಸತ್ತಿನಲ್ಲಿ ಮಂಡಿಸಿಲ್ಲ, ಚರ್ಚೆಯೂ ಆಗಿಲ್ಲ. ರಾಜ್ಯದಲ್ಲೂ ಕರಡು ಅಧಿಸೂಚನೆ ಹೊರಡಿಸಿಲ್ಲ. ವಿಧಾನಸಭೆ, ವಿಧಾನ ಪರಿಷತ್ನಲ್ಲಿ ಚರ್ಚೆಯಾಗಿಲ್ಲ. ಸಂವಿಧಾನದ ಪರಿಚ್ಛೇದ 7ರ ಪ್ರಕಾರ ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿದೆ. ಅಂದರೆ, ಶಿಕ್ಷಣದ ವಿಚಾರದಲ್ಲಿ ರಾಜ್ಯಗಳಿಗೂ ಇರುವ ಸಮಾನ ಹಕ್ಕನ್ನು ಕಿತ್ತುಕೊಂಡು ಕೇಂದ್ರ ಬಲವಂತದಿಂದ ರಾಜ್ಯಗಳಲ್ಲಿ ಜಾರಿ ಮಾಡಲು ಹೊರಟಿದೆ. ಈ ನಡೆ ಹಲವು ಅನುಮಾನಗಳಿಗೂ ಕಾರಣವಾಗಿದೆ’ ಎಂದು ಅವರು ಹೇಳಿದ್ದಾರೆ.