ಮೈಸೂರು: ‘ಮತ್ತೆ ವಾಚ್ ಪ್ರಕರಣ ಕೆದಕುತ್ತಿದ್ದಾರೆ. ಕಳ್ಳತನದ ವಾಚ್ ಎಂದು ಕುಮಾರಸ್ವಾಮಿ ಹೇಳಿದ್ದರಿಂದ ಪ್ರಕರಣವನ್ನು ಆಗಲೇ ಎಸಿಬಿಗೆ ವಹಿಸಿದ್ದೆ. ತನಿಖೆಯಾಗಿ ನನಗೆ ವಾಚ್ ಕೊಟ್ಟ ದುಬೈನ ಡಾ.ವರ್ಮಾ ಎಂಬುವರು ಪ್ರಮಾಣಪತ್ರ ಸಲ್ಲಿಸಿ ರಸೀದಿ ಕೂಡ ನೀಡಿದ್ದು, ಪ್ರಕರಣ ಇತ್ಯರ್ಥವಾಗಿದೆ. ಸರ್ಕಾರಕ್ಕೇ ವಾಚ್ ಒಪ್ಪಿಸಿದ್ದೇನೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.