<p><strong>ಬೆಂಗಳೂರು: </strong>ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿ ಪ್ರವೇಶಿಸದಂತೆ ತಡೆಯುವುದು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.</p>.<p>ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಶಾಲೆ, ಕಾಲೇಜುಗಳಲ್ಲಿ ಹಿಜಾಬ್ ಧರಿಸಬಾರದು ಎಂಬ ನಿಯಮವೇ ಇಲ್ಲ. ಈಗ ಕೆಲವು ಕಾಲೇಜುಗಳ ಪ್ರಾಂಶುಪಾಲರು ಹಿಜಾಬ್ ಧರಿಸಿ ಬರುವವರಿಗೆ ತರಗತಿ ಕೊಠಡಿ ಪ್ರವೇಶಿಸದಂತೆ ತಡೆಯುತ್ತಿರುವುದು ಮೂಲಭೂತ ಹಕ್ಕುಗಳ ಉಲ್ಲಂಘನೆ' ಎಂದರು.</p>.<p>ಹಿಜಾಬ್ ಧರಿಸಿ ತರಗತಿಗೆ ಬರುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಈಗ ಅದನ್ನು ವಿರೋಧಿಸುತ್ತಿರುವುದರ ಹಿಂದೆ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಕುಟಿಲ ಪ್ರಯತ್ನವಿದೆ ಎಂದರು.</p>.<p>ಹಿಜಾಬ್ ಧರಿಸಿ ಕಾಲೇಜಿಗೆ ಬರಬಾರದು ಎಂದು ಹೇಳಲು ಶಾಸಕ ರಘುಪತಿ ಭಟ್ ಯಾರು? ಈ ರೀತಿಯ ಕ್ರಮ ಕೈಗೊಂಡಿರುವ ಪ್ರಾಂಶುಪಾಲರ ವಿರುದ್ಧ ಸರ್ಕಾರ ಕ್ರಮ ಜರುಗಿಸಬೇಕು. ಅವರನ್ನು ಕೆಲಸದಿಂದ ವಜಾ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.</p>.<p>ಇದನ್ನೂ ಓದಿ.. <a href="https://www.prajavani.net/karnataka-news/education-minister-b-c-nagesh-says-that-no-admission-to-college-unless-wearing-uniform-907962.html"><strong>ಸಮವಸ್ತ್ರ ಧರಿಸದಿದ್ದರೆ ಕಾಲೇಜು ಪ್ರವೇಶಕ್ಕೆ ಅವಕಾಶವಿಲ್ಲ: ಬಿ.ಸಿ.ನಾಗೇಶ್</strong></a></p>.<p><strong>‘ಹಿಜಾಬ್ ಸಂಘರ್ಷ ಎಂಬುದೇ ಇಲ್ಲ’</strong></p>.<p>‘ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಶಾಲೆ, ಕಾಲೇಜಿಗೆ ಬರುವ ವಿಚಾರದಲ್ಲಿ ಸಂಘರ್ಷ ಎಂಬುದೇ ಇಲ್ಲ. ಉಡುಪಿಯಲ್ಲಿ ಕೆಲವರು ದುರುದ್ದೇಶದಿಂದ ಆ ರೀತಿ ಮಾಡುತ್ತಿದ್ದಾರೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್ ಹೇಳಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕರಾವಳಿಯ ನೂರಾರು ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗಳಿಗೆ ಹೋಗುತ್ತಿದ್ದಾರೆ. ಹಿಜಾಬ್ ಎಂದರೆ ತಲೆಗೂದಲು ಮುಚ್ಚಿಕೊಳ್ಳುವ ವಸ್ತ್ರ. ಅದನ್ನು ಎಲ್ಲ ವರ್ಗದವರೂ ಧರಿಸುತ್ತಾರೆ’ ಎಂದರು.</p>.<p><strong>‘ರಾಜಕೀಯಕ್ಕೆ ವಿದ್ಯಾರ್ಥಿಗಳ ಬಳಕೆ’</strong></p>.<p>‘ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಕೆಲವರು ರಾಜಕೀಯ ಮಾಡು<br />ತ್ತಿದ್ದಾರೆ.ಉತ್ತಮ ಭವಿಷ್ಯಕ್ಕಾಗಿ ಶಿಕ್ಷಣ ಪಡೆಯಲು ಬರುವ ಮಕ್ಕಳನ್ನೂ ರಾಜಕೀಯಕ್ಕೆ ಬಳಸಿಕೊಳ್ಳು<br />ತ್ತಿರುವುದು ದುರದೃಷ್ಟಕರ’ಎಂದು ಕಾಂಗ್ರೆಸ್ ಶಾಸಕ ಬಿ.ಜೆಡ್.ಜಮೀರ್ ಅಹಮ್ಮದ್ ಖಾನ್ ಹೇಳಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಹಿಜಾಬ್ ಧಾರಣೆ ಈಗಿನಿಂದ ಆರಂಭವಾದುದಲ್ಲ. ಬಹಳ ಹಿಂದಿನಿಂದಲೂ ಇದೆ. ಬ್ರಿಟಿಷರ ಕಾಲದಿಂದಲೂ ಇತ್ತು. ಉಡುಪಿ ಕಾಲೇಜೊಂದರಲ್ಲಿ ರಾಜಕೀಯ ಕಾರಣಕ್ಕೆ ಆರಂಭವಾದ ವಿರೋಧ ಈಗ ಎಲ್ಲ ಕಡೆಯೂ ಹರಡುತ್ತಿದೆ’ ಎಂದರು.</p>.<p><strong>‘ಬಹಿರಂಗ ಚರ್ಚಿಸುವ ವಿಚಾರವಲ್ಲ’</strong></p>.<p>‘ಹಿಜಾಬ್ ಧಾರಣೆ ವಿಷಯದಲ್ಲಿ ಮಕ್ಕಳು, ಧಾರ್ಮಿಕ ಆಚರಣೆಯಂತಹ ಸೂಕ್ಷ್ಮ ವಿಚಾರಗಳು ಅಡಗಿವೆ. ಇದು ಬಹಿರಂಗವಾಗಿ ಚರ್ಚಿಸುವ ವಿಚಾರವಲ್ಲ. ಈ ಕುರಿತು ಒಂದು ಚೌಕಟ್ಟಿನಲ್ಲಿ ಚರ್ಚೆ ಮಾಡಬೇಕಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಈ ಕುರಿತು ಶುಕ್ರವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಮೊದಲಿನಿಂದ ಆಚರಿಸಿಕೊಂಡು ಬಂದ ಪದ್ಧತಿ, ಸಂಸ್ಕೃತಿ, ಇತಿಹಾಸ, ಕಾನೂನು ಎಲ್ಲವನ್ನೂ ಚರ್ಚಿಸಬೇಕಾಗಿದೆ. ಈ ವಿಚಾರವನ್ನು ಗಮನಿಸುತ್ತಿದ್ದೇನೆ. ಈ ಕುರಿತು ಸ್ಥಳೀಯ ನಾಯಕರ ಜತೆಗೂ ಚರ್ಚಿಸಬೇಕಾಗಿದೆ’ ಎಂದರು.</p>.<p>ನ್ಯಾಯಾಲಯ ಮಧ್ಯ ಪ್ರವೇಶಿಸಿರುವುದರಿಂದ ಪಕ್ಷದ ಅಧ್ಯಕ್ಷನಾಗಿ ತಾವು ಮಾತನಾಡುವುದು ಸರಿಯಾಗುವುದಿಲ್ಲ. ಎಲ್ಲರಿಗೂ ಅವರದ್ದೇ ಆದ ಜೀವನ ಪದ್ಧತಿ, ಸಂಸ್ಕೃತಿ ಇರುವ ಕುರಿತು ಚರ್ಚೆ ಆಗಬೇಕಿದೆ ಎಂದು ಹೇಳಿದರು.</p>.<p><strong>‘ಇಂತಹ ಘಟನೆಗಳು ತಪ್ಪು’</strong></p>.<p>‘ಹಿಜಾಬ್ ಧಾರಣೆಗೆ ವಿರೋಧಿಸುವಂತಹ ಘಟನೆಗಳು ತಪ್ಪು’ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.</p>.<p>ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಭಾರತವು ವಿವಿಧತೆಯಲ್ಲಿ ಏಕತೆಯನ್ನು ಸಂಭ್ರಮಿಸುವ ದೇಶ. ಈ ನಾಡಿನಲ್ಲಿ ಇಂತಹ ಘಟನೆಗಳು ಸರಿಯಲ್ಲ. ಧರ್ಮದ ಹೆಸರಿನಲ್ಲಿ ಮಕ್ಕಳ ಮನಸ್ಸಿನ ಮೇಲೆ ಪ್ರಭಾವ ಬೀರಿ, ವಿಭಜನೆಗೆ ಪ್ರಯತ್ನಿಸಬಾರದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿ ಪ್ರವೇಶಿಸದಂತೆ ತಡೆಯುವುದು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.</p>.<p>ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಶಾಲೆ, ಕಾಲೇಜುಗಳಲ್ಲಿ ಹಿಜಾಬ್ ಧರಿಸಬಾರದು ಎಂಬ ನಿಯಮವೇ ಇಲ್ಲ. ಈಗ ಕೆಲವು ಕಾಲೇಜುಗಳ ಪ್ರಾಂಶುಪಾಲರು ಹಿಜಾಬ್ ಧರಿಸಿ ಬರುವವರಿಗೆ ತರಗತಿ ಕೊಠಡಿ ಪ್ರವೇಶಿಸದಂತೆ ತಡೆಯುತ್ತಿರುವುದು ಮೂಲಭೂತ ಹಕ್ಕುಗಳ ಉಲ್ಲಂಘನೆ' ಎಂದರು.</p>.<p>ಹಿಜಾಬ್ ಧರಿಸಿ ತರಗತಿಗೆ ಬರುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಈಗ ಅದನ್ನು ವಿರೋಧಿಸುತ್ತಿರುವುದರ ಹಿಂದೆ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಕುಟಿಲ ಪ್ರಯತ್ನವಿದೆ ಎಂದರು.</p>.<p>ಹಿಜಾಬ್ ಧರಿಸಿ ಕಾಲೇಜಿಗೆ ಬರಬಾರದು ಎಂದು ಹೇಳಲು ಶಾಸಕ ರಘುಪತಿ ಭಟ್ ಯಾರು? ಈ ರೀತಿಯ ಕ್ರಮ ಕೈಗೊಂಡಿರುವ ಪ್ರಾಂಶುಪಾಲರ ವಿರುದ್ಧ ಸರ್ಕಾರ ಕ್ರಮ ಜರುಗಿಸಬೇಕು. ಅವರನ್ನು ಕೆಲಸದಿಂದ ವಜಾ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.</p>.<p>ಇದನ್ನೂ ಓದಿ.. <a href="https://www.prajavani.net/karnataka-news/education-minister-b-c-nagesh-says-that-no-admission-to-college-unless-wearing-uniform-907962.html"><strong>ಸಮವಸ್ತ್ರ ಧರಿಸದಿದ್ದರೆ ಕಾಲೇಜು ಪ್ರವೇಶಕ್ಕೆ ಅವಕಾಶವಿಲ್ಲ: ಬಿ.ಸಿ.ನಾಗೇಶ್</strong></a></p>.<p><strong>‘ಹಿಜಾಬ್ ಸಂಘರ್ಷ ಎಂಬುದೇ ಇಲ್ಲ’</strong></p>.<p>‘ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಶಾಲೆ, ಕಾಲೇಜಿಗೆ ಬರುವ ವಿಚಾರದಲ್ಲಿ ಸಂಘರ್ಷ ಎಂಬುದೇ ಇಲ್ಲ. ಉಡುಪಿಯಲ್ಲಿ ಕೆಲವರು ದುರುದ್ದೇಶದಿಂದ ಆ ರೀತಿ ಮಾಡುತ್ತಿದ್ದಾರೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್ ಹೇಳಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕರಾವಳಿಯ ನೂರಾರು ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗಳಿಗೆ ಹೋಗುತ್ತಿದ್ದಾರೆ. ಹಿಜಾಬ್ ಎಂದರೆ ತಲೆಗೂದಲು ಮುಚ್ಚಿಕೊಳ್ಳುವ ವಸ್ತ್ರ. ಅದನ್ನು ಎಲ್ಲ ವರ್ಗದವರೂ ಧರಿಸುತ್ತಾರೆ’ ಎಂದರು.</p>.<p><strong>‘ರಾಜಕೀಯಕ್ಕೆ ವಿದ್ಯಾರ್ಥಿಗಳ ಬಳಕೆ’</strong></p>.<p>‘ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಕೆಲವರು ರಾಜಕೀಯ ಮಾಡು<br />ತ್ತಿದ್ದಾರೆ.ಉತ್ತಮ ಭವಿಷ್ಯಕ್ಕಾಗಿ ಶಿಕ್ಷಣ ಪಡೆಯಲು ಬರುವ ಮಕ್ಕಳನ್ನೂ ರಾಜಕೀಯಕ್ಕೆ ಬಳಸಿಕೊಳ್ಳು<br />ತ್ತಿರುವುದು ದುರದೃಷ್ಟಕರ’ಎಂದು ಕಾಂಗ್ರೆಸ್ ಶಾಸಕ ಬಿ.ಜೆಡ್.ಜಮೀರ್ ಅಹಮ್ಮದ್ ಖಾನ್ ಹೇಳಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಹಿಜಾಬ್ ಧಾರಣೆ ಈಗಿನಿಂದ ಆರಂಭವಾದುದಲ್ಲ. ಬಹಳ ಹಿಂದಿನಿಂದಲೂ ಇದೆ. ಬ್ರಿಟಿಷರ ಕಾಲದಿಂದಲೂ ಇತ್ತು. ಉಡುಪಿ ಕಾಲೇಜೊಂದರಲ್ಲಿ ರಾಜಕೀಯ ಕಾರಣಕ್ಕೆ ಆರಂಭವಾದ ವಿರೋಧ ಈಗ ಎಲ್ಲ ಕಡೆಯೂ ಹರಡುತ್ತಿದೆ’ ಎಂದರು.</p>.<p><strong>‘ಬಹಿರಂಗ ಚರ್ಚಿಸುವ ವಿಚಾರವಲ್ಲ’</strong></p>.<p>‘ಹಿಜಾಬ್ ಧಾರಣೆ ವಿಷಯದಲ್ಲಿ ಮಕ್ಕಳು, ಧಾರ್ಮಿಕ ಆಚರಣೆಯಂತಹ ಸೂಕ್ಷ್ಮ ವಿಚಾರಗಳು ಅಡಗಿವೆ. ಇದು ಬಹಿರಂಗವಾಗಿ ಚರ್ಚಿಸುವ ವಿಚಾರವಲ್ಲ. ಈ ಕುರಿತು ಒಂದು ಚೌಕಟ್ಟಿನಲ್ಲಿ ಚರ್ಚೆ ಮಾಡಬೇಕಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಈ ಕುರಿತು ಶುಕ್ರವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಮೊದಲಿನಿಂದ ಆಚರಿಸಿಕೊಂಡು ಬಂದ ಪದ್ಧತಿ, ಸಂಸ್ಕೃತಿ, ಇತಿಹಾಸ, ಕಾನೂನು ಎಲ್ಲವನ್ನೂ ಚರ್ಚಿಸಬೇಕಾಗಿದೆ. ಈ ವಿಚಾರವನ್ನು ಗಮನಿಸುತ್ತಿದ್ದೇನೆ. ಈ ಕುರಿತು ಸ್ಥಳೀಯ ನಾಯಕರ ಜತೆಗೂ ಚರ್ಚಿಸಬೇಕಾಗಿದೆ’ ಎಂದರು.</p>.<p>ನ್ಯಾಯಾಲಯ ಮಧ್ಯ ಪ್ರವೇಶಿಸಿರುವುದರಿಂದ ಪಕ್ಷದ ಅಧ್ಯಕ್ಷನಾಗಿ ತಾವು ಮಾತನಾಡುವುದು ಸರಿಯಾಗುವುದಿಲ್ಲ. ಎಲ್ಲರಿಗೂ ಅವರದ್ದೇ ಆದ ಜೀವನ ಪದ್ಧತಿ, ಸಂಸ್ಕೃತಿ ಇರುವ ಕುರಿತು ಚರ್ಚೆ ಆಗಬೇಕಿದೆ ಎಂದು ಹೇಳಿದರು.</p>.<p><strong>‘ಇಂತಹ ಘಟನೆಗಳು ತಪ್ಪು’</strong></p>.<p>‘ಹಿಜಾಬ್ ಧಾರಣೆಗೆ ವಿರೋಧಿಸುವಂತಹ ಘಟನೆಗಳು ತಪ್ಪು’ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.</p>.<p>ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಭಾರತವು ವಿವಿಧತೆಯಲ್ಲಿ ಏಕತೆಯನ್ನು ಸಂಭ್ರಮಿಸುವ ದೇಶ. ಈ ನಾಡಿನಲ್ಲಿ ಇಂತಹ ಘಟನೆಗಳು ಸರಿಯಲ್ಲ. ಧರ್ಮದ ಹೆಸರಿನಲ್ಲಿ ಮಕ್ಕಳ ಮನಸ್ಸಿನ ಮೇಲೆ ಪ್ರಭಾವ ಬೀರಿ, ವಿಭಜನೆಗೆ ಪ್ರಯತ್ನಿಸಬಾರದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>