ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವೇಗೌಡರದ್ದು ಪುಟಗೋಸಿ ರಾಜಕಾರಣವಾ: ಕುಮಾರಸ್ವಾಮಿಗೆ ಸಿದ್ದರಾಮಯ್ಯ ಪ್ರಶ್ನೆ

Last Updated 13 ಅಕ್ಟೋಬರ್ 2021, 7:24 IST
ಅಕ್ಷರ ಗಾತ್ರ

ಕಲಬುರಗಿ: ‘ಪುಟಗೋಸಿ ವಿರೋಧ ಪಕ್ಷದ ನಾಯಕನಾಗಲು ನಾನು ಸಮ್ಮಿಶ್ರ ಸರ್ಕಾರ ಕೆಡವಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಹಾಗಿದ್ದರೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರೂ ವಿರೋಧ ಪಕ್ಷದ ನಾಯಕರಾಗಿದ್ದರು. ಅವರದ್ದೂ ಪುಟಗೋಸಿ ರಾಜಕಾರಣವಾ’ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿರೋಧ ಪಕ್ಷದ ನಾಯಕನ ಸ್ಥಾನದ ಬಗ್ಗೆ ಕುಮಾರಸ್ವಾಮಿ ಅವರಿಗಿರುವ ಗೌರವ ಏನೆಂಬುದು ಅವರ ಹೇಳಿಕೆಯಿಂದ ವ್ಯಕ್ತವಾಗಿದೆ. ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ದೇವೇಗೌಡರು ಪ್ರತಿಪಕ್ಷ ನಾಯಕರಾಗಿದ್ದರು. ಅವರದ್ದೂ ಪುಟಗೋಸಿ ರಾಜಕಾರಣವಾ’ ಎಂದು ಪ್ರಶ್ನಿಸಿದ್ದಾರೆ.

ನನ್ನದು ಕಾಂಗ್ರೆಸ್ ವಿರುದ್ಧ ಅಲ್ಲ, ಸಿದ್ದರಾಮಯ್ಯ ವಿರುದ್ಧ ಹೋರಾಟ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಅವರಿಗೆ ನನ್ನ ಬಗ್ಗೆ ಭಯವಿದೆ. ಹಾಗಾಗಿ ನನ್ನ ವಿರುದ್ಧ ಮಾತನಾಡುತ್ತಾರೆ ಅಷ್ಟೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT