<p><strong>ಕಲಬುರಗಿ: </strong>‘ಪುಟಗೋಸಿ ವಿರೋಧ ಪಕ್ಷದ ನಾಯಕನಾಗಲು ನಾನು ಸಮ್ಮಿಶ್ರ ಸರ್ಕಾರ ಕೆಡವಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಹಾಗಿದ್ದರೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರೂ ವಿರೋಧ ಪಕ್ಷದ ನಾಯಕರಾಗಿದ್ದರು. ಅವರದ್ದೂ ಪುಟಗೋಸಿ ರಾಜಕಾರಣವಾ’ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.</p>.<p>ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿರೋಧ ಪಕ್ಷದ ನಾಯಕನ ಸ್ಥಾನದ ಬಗ್ಗೆ ಕುಮಾರಸ್ವಾಮಿ ಅವರಿಗಿರುವ ಗೌರವ ಏನೆಂಬುದು ಅವರ ಹೇಳಿಕೆಯಿಂದ ವ್ಯಕ್ತವಾಗಿದೆ. ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ದೇವೇಗೌಡರು ಪ್ರತಿಪಕ್ಷ ನಾಯಕರಾಗಿದ್ದರು. ಅವರದ್ದೂ ಪುಟಗೋಸಿ ರಾಜಕಾರಣವಾ’ ಎಂದು ಪ್ರಶ್ನಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/karnataka-news/siddaramaiah-doing-brutus-style-politics-says-hd-kumaraswamy-874467.html" itemprop="url">ಸಿದ್ದರಾಮಯ್ಯ ಅವರದ್ದು ‘ಬ್ರೂಟಸ್’ ರಾಜಕಾರಣ: ಎಚ್.ಡಿ. ಕುಮಾರಸ್ವಾಮಿ</a></p>.<p>ನನ್ನದು ಕಾಂಗ್ರೆಸ್ ವಿರುದ್ಧ ಅಲ್ಲ, ಸಿದ್ದರಾಮಯ್ಯ ವಿರುದ್ಧ ಹೋರಾಟ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಅವರಿಗೆ ನನ್ನ ಬಗ್ಗೆ ಭಯವಿದೆ. ಹಾಗಾಗಿ ನನ್ನ ವಿರುದ್ಧ ಮಾತನಾಡುತ್ತಾರೆ ಅಷ್ಟೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/district/kalaburagi/karnataka-politics-siddaramaiah-bs-yediyurappa-hd-kumaraswamy-jds-congress-bjp-875238.html" itemprop="url">ನಾನು ಯಡಿಯೂರಪ್ಪ ಭೇಟಿ ಮಾಡಿದ್ದು ಸಾಬೀತು ಮಾಡಿದರೆ ರಾಜಕೀಯ ಸನ್ಯಾಸ: ಸಿದ್ದರಾಮಯ್ಯ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ: </strong>‘ಪುಟಗೋಸಿ ವಿರೋಧ ಪಕ್ಷದ ನಾಯಕನಾಗಲು ನಾನು ಸಮ್ಮಿಶ್ರ ಸರ್ಕಾರ ಕೆಡವಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಹಾಗಿದ್ದರೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರೂ ವಿರೋಧ ಪಕ್ಷದ ನಾಯಕರಾಗಿದ್ದರು. ಅವರದ್ದೂ ಪುಟಗೋಸಿ ರಾಜಕಾರಣವಾ’ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.</p>.<p>ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿರೋಧ ಪಕ್ಷದ ನಾಯಕನ ಸ್ಥಾನದ ಬಗ್ಗೆ ಕುಮಾರಸ್ವಾಮಿ ಅವರಿಗಿರುವ ಗೌರವ ಏನೆಂಬುದು ಅವರ ಹೇಳಿಕೆಯಿಂದ ವ್ಯಕ್ತವಾಗಿದೆ. ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ದೇವೇಗೌಡರು ಪ್ರತಿಪಕ್ಷ ನಾಯಕರಾಗಿದ್ದರು. ಅವರದ್ದೂ ಪುಟಗೋಸಿ ರಾಜಕಾರಣವಾ’ ಎಂದು ಪ್ರಶ್ನಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/karnataka-news/siddaramaiah-doing-brutus-style-politics-says-hd-kumaraswamy-874467.html" itemprop="url">ಸಿದ್ದರಾಮಯ್ಯ ಅವರದ್ದು ‘ಬ್ರೂಟಸ್’ ರಾಜಕಾರಣ: ಎಚ್.ಡಿ. ಕುಮಾರಸ್ವಾಮಿ</a></p>.<p>ನನ್ನದು ಕಾಂಗ್ರೆಸ್ ವಿರುದ್ಧ ಅಲ್ಲ, ಸಿದ್ದರಾಮಯ್ಯ ವಿರುದ್ಧ ಹೋರಾಟ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಅವರಿಗೆ ನನ್ನ ಬಗ್ಗೆ ಭಯವಿದೆ. ಹಾಗಾಗಿ ನನ್ನ ವಿರುದ್ಧ ಮಾತನಾಡುತ್ತಾರೆ ಅಷ್ಟೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/district/kalaburagi/karnataka-politics-siddaramaiah-bs-yediyurappa-hd-kumaraswamy-jds-congress-bjp-875238.html" itemprop="url">ನಾನು ಯಡಿಯೂರಪ್ಪ ಭೇಟಿ ಮಾಡಿದ್ದು ಸಾಬೀತು ಮಾಡಿದರೆ ರಾಜಕೀಯ ಸನ್ಯಾಸ: ಸಿದ್ದರಾಮಯ್ಯ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>