ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಎಸ್‌ಎಸ್ ಉನ್ನತ ಪದಾಧಿಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ? - ಸಿದ್ದರಾಮಯ್ಯ

ಅಕ್ಷರ ಗಾತ್ರ

ಬೆಂಗಳೂರು: 'ಹಿಂದುಗಳೆಲ್ಲ ಒಂದು ಎನ್ನುವ ಆರ್‌ಎಸ್‌ಎಸ್‌ನಲ್ಲಿ ಉನ್ನತ ಪದಾಧಿಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ? ಉಳಿದ ಜಾತಿಗಳು ಯಾಕೆ ಅಸ್ಪೃಶ್ಯವಾಗಿವೆ? ದಯವಿಟ್ಟು ಉತ್ತರಿಸಿ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸೋಮವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, 'ನಿಮ್ಮ ಸಂಘದಲ್ಲಿ ಒಂದು ಜಾತಿಯ ಪದಾಧಿಕಾರಿಗಳು ಮಾತ್ರ ಯಾಕಿದ್ದಾರೆ ? ಇಂತಹದೊಂದು ಸರಳ ಪ್ರಶ್ನೆಗೆ ಆರ್‌ಎಸ್‌ಎಸ್‌ನಲ್ಲಿ ಉತ್ತರ ಇಲ್ಲ ಎನ್ನುವುದೇ ಈ ಸಂಘಟನೆಯ ಡೋಂಗಿತನಕ್ಕೆ ಸಾಕ್ಷಿ. ದಲಿತರು, ಹಿಂದುಳಿದವರು ಸೇರಿದಂತೆ ಬೇರೆ ಜಾತಿಗಳಿಗೆ ಯಾಕೆ ಅವಕಾಶ ಇಲ್ಲ?' ಎಂದು ಪ್ರಶ್ನಿಸಿದ್ದಾರೆ.

'97 ವರ್ಷಗಳ ಇತಿಹಾಸವಿರುವ ಆರ್‌ಎಸ್‌ಎಸ್ ನನ್ನದೊಂದು ಸರಳ ಪ್ರಶ್ನೆಗೆ ಉತ್ತರಿಸಲಾಗದಷ್ಟು ದುರ್ಬಲ ಸಂಘಟನೆಯೇ? ನನ್ನ ಸರಳ ಪ್ರಶ್ನೆಗೆ ಉತ್ತರಿಸಲಾಗದ ಆರ್‌ಎಸ್‌ಎಸ್, ಬಿಜೆಪಿಯ ಕೂಗುಮಾರಿಗಳನ್ನು ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸಲು ಛೂ ಬಿಟ್ಟಿದೆ' ಎಂದು ಆರೋಪಿಸಿದ್ದಾರೆ.

'ಬಿಜೆಪಿಯ ಒಬ್ಬ ನಾಯಕರು ಆರ್‌ಎಸ್‌ಎಸ್ ಶಾಖೆಗೆ ಬನ್ನಿ ಎಂದು ಕರೆಯುತ್ತಿದ್ದಾರೆ, ಇನ್ನೊಬ್ಬರು ಆರ್‌ಎಸ್‌ಎಸ್ ಪುಸ್ತಕ ಓದಿ ಎಂದು ಸಲಹೆ ನೀಡಿದ್ದಾರೆ. ಅಲ್ಲಿಗೆ ಹೋಗಿ, ಓದಿ ಏನನ್ನು ಕಲಿಯುವುದು? 40% ಕಮಿಷನ್ ಹೊಡೆಯುವುದಾ? ದುಡ್ಡು ಪಡೆದು ಪಕ್ಷಾಂತರ ಮಾಡುವುದಾ?' ಎಂದು ತಿರುಗೇಟು ನೀಡಿದ್ದಾರೆ.

'ನನ್ನ ಮೇಲೆ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ನಾಯಕರ ಮಾತುಗಳೇ, ಆರ್‌ಎಸ್‌ಎಸ್ ತನ್ನ ಸ್ವಯಂಸೇವಕರಿಗೆ ಕಲಿಸಿಕೊಡುವ ಸಂಸ್ಕಾರ-ಸಂಸ್ಕೃತಿ ಏನು ಎನ್ನುವುದನ್ನು ಸೂಚಿಸುತ್ತದೆ' ಎಂದು ಹೇಳಿದ್ದಾರೆ.

'ಆರ್‌ಎಸ್‌ಎಸ್ ಶಾಖೆಗಳಿಗೆ ಹೋದರೆ ಏನಾಗುತ್ತದೆ ಎನ್ನುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರೇ ಜೀವಂತ ಉದಾಹರಣೆ. ಸಂಸ್ಕೃತಿ, ಸಂಸ್ಕಾರ, ಸಚ್ಛಾರಿತ್ರ್ಯದಂತಹ ಮೌಲ್ಯಗಳಿಗೂ, ನಿತ್ಯ ಶಬ್ದಭೇದಿ ಮಾಡುತ್ತಿರುವ ಕಟೀಲ್ ಅವರಿಗೂ ಏನಾದರೂ ಸಂಬಂಧವಿದೆಯೇ?' ಎಂದು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT