‘ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿಗೆ ಬಿ.ಎಸ್.ಯಡಿಯೂರಪ್ಪ ಅವರನ್ನು ಸೇರಿಸಿಕೊಂಡಿರುವುದು ಸ್ವಾಗತಾರ್ಹ. ಅವರ ಹಿರಿತನ, ಶ್ರಮ ಗಮನಿಸಿ ದೊಡ್ಡ ಸ್ಥಾನ ನೀಡಲಾಗಿದೆ. ಮುಖ್ಯಮಂತ್ರಿ ಯಾರಾಗಬೇಕು ಎಂಬುದರಿಂದ ಹಿಡಿದು ಎಲ್ಲವನ್ನೂ ಆ ಸಮಿತಿ ತೀರ್ಮಾನಿಸುತ್ತದೆ. ಭವಿಷ್ಯದ ಚುನಾವಣೆ ದೃಷ್ಟಿಯಿಂದ ಪಕ್ಷವು ಒಳ್ಳೆಯ ನಿರ್ಧಾರ ಮಾಡಿದೆ’ ಎಂದು ಪ್ರತಿಕ್ರಿಯಿಸಿದರು.