ಬೆಂಗಳೂರು: ‘ನಾನು ಯಾವತ್ತೂ ಮುಖ್ಯಮಂತ್ರಿ ಆಗಬೇಕು ಎಂದು ಹೇಳಲ್ಲ. ಚೀಫ್ ಮಿನಿಸ್ಟರ್ ಅಂತ ಹೇಳಬೇಡಿ ಎಂದು ಶಾಸಕರಿಗೆ ನಾನು ಮನವಿ ಮಾಡುತ್ತೇನೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
‘ಶಾಸಕರ ಹೇಳಿಕೆಗಳನ್ನು ಶಾಸಕಾಂಗ ಪಕ್ಷದ ನಾಯಕರು ನೋಡಿಕೊಳ್ಳುತ್ತಾರೆ. ಅವರು ನೋಡಿಕೊಳ್ಳದಿದ್ದರೆ, ಆ ಬಗ್ಗೆ ಗಮನಹರಿಸಲು ಕಾಂಗ್ರೆಸ್ ಪಕ್ಷ ಬದುಕಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬುಧವಾರ ಹೇಳಿದ್ದರು.
ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಸಿದ್ದರಾಮಯ್ಯ, ‘ನಾನು ಅವರ (ಡಿ.ಕೆ. ಶಿವಕುಮಾರ್) ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ, ಏನೋ ಮಾತಾಡಿದಾರೆ. ನಾನು ಯಾವುದಕ್ಕೂ ಪ್ರತಿಕ್ರಿಯೆ ಮಾಡಲ್ಲ’ ಎಂದರು.