ಈ ಕುರಿತು ಭಾನುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಮಂಗಳೂರಿನ ಲೇಡಿ ಹಿಲ್ ವೃತ್ತಕ್ಕೆ ನಾರಾಯಣ ಗುರುಗಳ ಹೆಸರನ್ನು ನಾಮಕರಣ ಮಾಡಲು ಅಲ್ಲಿನ ಮಹಾನಗರ ಪಾಲಿಕೆ ನಿರ್ಣಯ ತೆಗೆದುಕೊಂಡಾಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ವಿರೋಧಿಸಿತ್ತು. ಆ ಸಮಯದಲ್ಲಿ ನೀವು ಮೌನಕ್ಕೆ ಶರಣಾಗಿದ್ದೀರಿ. ಆಗ ನಿಮಗೆ ನಾರಾಯಣ ಗುರುಗಳ ಬಗ್ಗೆ ಗೌರವ ಇರಲಿಲ್ಲಿವೆ? ಕೇರಳ ಸರ್ಕಾರ ಸೃಷ್ಟಿಸಿದ ತಪ್ಪನ್ನು ನೀವು ಏಕೆ ಪೋಷಿಸುತ್ತೀರಿ’ ಎಂದು ಪ್ರಶ್ನಿಸಿದ್ದಾರೆ.