<p><strong>ಬೆಂಗಳೂರು: </strong>ಕೇರಳದ ಕಮ್ಯುನಿಸ್ಟ್ ಸರ್ಕಾರವು ನಾರಾಯಣ ಗುರುಗಳ ಹೆಸರನ್ನು ಎಳೆದು ತಂದು ಸೃಷ್ಟಿಸಿರುವ ಸ್ತಬ್ಧಚಿತ್ರದ ವಿವಾದದ ಉರಿಯುವ ಬೆಂಕಿಯಲ್ಲಿ ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೈ ಕಾಯಿಸಿಕೊಳ್ಳುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಟೀಕಿಸಿದ್ದಾರೆ.</p>.<p>ಈ ಕುರಿತು ಭಾನುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಮಂಗಳೂರಿನ ಲೇಡಿ ಹಿಲ್ ವೃತ್ತಕ್ಕೆ ನಾರಾಯಣ ಗುರುಗಳ ಹೆಸರನ್ನು ನಾಮಕರಣ ಮಾಡಲು ಅಲ್ಲಿನ ಮಹಾನಗರ ಪಾಲಿಕೆ ನಿರ್ಣಯ ತೆಗೆದುಕೊಂಡಾಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ವಿರೋಧಿಸಿತ್ತು. ಆ ಸಮಯದಲ್ಲಿ ನೀವು ಮೌನಕ್ಕೆ ಶರಣಾಗಿದ್ದೀರಿ. ಆಗ ನಿಮಗೆ ನಾರಾಯಣ ಗುರುಗಳ ಬಗ್ಗೆ ಗೌರವ ಇರಲಿಲ್ಲಿವೆ? ಕೇರಳ ಸರ್ಕಾರ ಸೃಷ್ಟಿಸಿದ ತಪ್ಪನ್ನು ನೀವು ಏಕೆ ಪೋಷಿಸುತ್ತೀರಿ’ ಎಂದು ಪ್ರಶ್ನಿಸಿದ್ದಾರೆ.</p>.<p>ಕೇಂದ್ರ ಸರ್ಕಾರ ನೇರವಾಗಿ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡುವುದಿಲ್ಲ. ಆ ಕೆಲಸವನ್ನು ರಕ್ಷಣಾ ಇಲಾಖೆಯ ಅಧಿಕಾರಿಗಳು ಮಾಡುತ್ತಾರೆ. ಈ ವಿಷಯದಲ್ಲಿ ನಾರಾಯಣ ಗುರು ಮತ್ತು ಶಂಕರಾಚಾರ್ಯರ ಹೆಸರನ್ನು ಎಳೆದು ತಂದು ಸಮಾಜ ಒಡೆಯಲು ಕೇರಳ ಸರ್ಕಾರ ಯತ್ನಿಸುತ್ತಿದೆ. ಈ ವಿವಾದದ ಕೂಸನ್ನು ರಾಜ್ಯದಲ್ಲಿ ಎತ್ತಿ ಆಡಿಸುತ್ತಿರುವ ಸಿದ್ದರಾಮಯ್ಯ, ಇಲ್ಲಿಯೂ ಸಮಾಜವನ್ನು ಒಡೆ<br />ಯಲು ಪ್ರಯತ್ನಿಸಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೇರಳದ ಕಮ್ಯುನಿಸ್ಟ್ ಸರ್ಕಾರವು ನಾರಾಯಣ ಗುರುಗಳ ಹೆಸರನ್ನು ಎಳೆದು ತಂದು ಸೃಷ್ಟಿಸಿರುವ ಸ್ತಬ್ಧಚಿತ್ರದ ವಿವಾದದ ಉರಿಯುವ ಬೆಂಕಿಯಲ್ಲಿ ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೈ ಕಾಯಿಸಿಕೊಳ್ಳುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಟೀಕಿಸಿದ್ದಾರೆ.</p>.<p>ಈ ಕುರಿತು ಭಾನುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಮಂಗಳೂರಿನ ಲೇಡಿ ಹಿಲ್ ವೃತ್ತಕ್ಕೆ ನಾರಾಯಣ ಗುರುಗಳ ಹೆಸರನ್ನು ನಾಮಕರಣ ಮಾಡಲು ಅಲ್ಲಿನ ಮಹಾನಗರ ಪಾಲಿಕೆ ನಿರ್ಣಯ ತೆಗೆದುಕೊಂಡಾಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ವಿರೋಧಿಸಿತ್ತು. ಆ ಸಮಯದಲ್ಲಿ ನೀವು ಮೌನಕ್ಕೆ ಶರಣಾಗಿದ್ದೀರಿ. ಆಗ ನಿಮಗೆ ನಾರಾಯಣ ಗುರುಗಳ ಬಗ್ಗೆ ಗೌರವ ಇರಲಿಲ್ಲಿವೆ? ಕೇರಳ ಸರ್ಕಾರ ಸೃಷ್ಟಿಸಿದ ತಪ್ಪನ್ನು ನೀವು ಏಕೆ ಪೋಷಿಸುತ್ತೀರಿ’ ಎಂದು ಪ್ರಶ್ನಿಸಿದ್ದಾರೆ.</p>.<p>ಕೇಂದ್ರ ಸರ್ಕಾರ ನೇರವಾಗಿ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡುವುದಿಲ್ಲ. ಆ ಕೆಲಸವನ್ನು ರಕ್ಷಣಾ ಇಲಾಖೆಯ ಅಧಿಕಾರಿಗಳು ಮಾಡುತ್ತಾರೆ. ಈ ವಿಷಯದಲ್ಲಿ ನಾರಾಯಣ ಗುರು ಮತ್ತು ಶಂಕರಾಚಾರ್ಯರ ಹೆಸರನ್ನು ಎಳೆದು ತಂದು ಸಮಾಜ ಒಡೆಯಲು ಕೇರಳ ಸರ್ಕಾರ ಯತ್ನಿಸುತ್ತಿದೆ. ಈ ವಿವಾದದ ಕೂಸನ್ನು ರಾಜ್ಯದಲ್ಲಿ ಎತ್ತಿ ಆಡಿಸುತ್ತಿರುವ ಸಿದ್ದರಾಮಯ್ಯ, ಇಲ್ಲಿಯೂ ಸಮಾಜವನ್ನು ಒಡೆ<br />ಯಲು ಪ್ರಯತ್ನಿಸಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>