<p><strong>ಬೆಂಗಳೂರು</strong>: ‘ಎರಡು ವರ್ಷಗಳಿಂದ ಪ್ರತಿಷ್ಠಿತ ‘ದೇವರಾಜ ಅರಸು ಪ್ರಶಸ್ತಿ’ ಪ್ರದಾನ ಮಾಡದೆ ನಾಡಿನ ಹೆಮ್ಮೆಯ ನಾಯಕನಿಗೆ ಅಗೌರವ ತೋರಿದ ಮುಖ್ಯಮಂತ್ರಿಗೆ, ಅರಸು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಯಾವ ನೈತಿಕ ಹಕ್ಕಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.</p>.<p>ಗುರುವಾರ ಟ್ವೀಟ್ ಮಾಡಿರುವ ಅವರು, ‘ರಾಜ್ಯ ಬಿಜೆಪಿ ಸರ್ಕಾರದ ನಡೆ ಖಂಡನೀಯ’ ಎಂದಿದ್ದಾರೆ.</p>.<p>‘ಡಿ.ದೇವರಾಜ ಅರಸು ಅವರ ಮೇಲೆ ನಿಮಗೆ ಒಂದಿಷ್ಟಾದರೂ ಗೌರವ ಇದ್ದರೆ ಮೊದಲು ಅವರು ಜಾರಿಗೆ ತಂದಿದ್ದ ಉಳುವವನನ್ನೇ ಭೂ ಒಡೆಯನನ್ನಾಗಿ ಮಾಡುವ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿ, ಉಳ್ಳವನಿಗೆ ಭೂಮಿ ನೀಡಲು ಹೊರಟಿರುವ ನಿಮ್ಮ ತೀರ್ಮಾನವನ್ನು ಹಿಂದಕ್ಕೆ ಪಡೆಯಿರಿ’ ಎಂದೂ ಮುಖ್ಯಮಂತ್ರಿ ಅವರನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.</p>.<p>ಆಗಸ್ಟ್ 20ರಂದು ಅರಸು ಜನ್ಮದಿನವಾಗಿದ್ದು, ಅರಸು ಅವರ ಹೆಸರಿನಲ್ಲೇ ಅದೇ ದಿನ ಪ್ರಶಸ್ತಿ ನೀಡುವ ಪದ್ಧತಿಯನ್ನು ಸರ್ಕಾರ ನಡೆಸಿಕೊಂಡು ಬಂದಿತ್ತು.ಪ್ರಶಸ್ತಿ ಪ್ರದಾನ ಮಾಡದೇ ಇರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಚರ್ಚೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಎರಡು ವರ್ಷಗಳಿಂದ ಪ್ರತಿಷ್ಠಿತ ‘ದೇವರಾಜ ಅರಸು ಪ್ರಶಸ್ತಿ’ ಪ್ರದಾನ ಮಾಡದೆ ನಾಡಿನ ಹೆಮ್ಮೆಯ ನಾಯಕನಿಗೆ ಅಗೌರವ ತೋರಿದ ಮುಖ್ಯಮಂತ್ರಿಗೆ, ಅರಸು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಯಾವ ನೈತಿಕ ಹಕ್ಕಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.</p>.<p>ಗುರುವಾರ ಟ್ವೀಟ್ ಮಾಡಿರುವ ಅವರು, ‘ರಾಜ್ಯ ಬಿಜೆಪಿ ಸರ್ಕಾರದ ನಡೆ ಖಂಡನೀಯ’ ಎಂದಿದ್ದಾರೆ.</p>.<p>‘ಡಿ.ದೇವರಾಜ ಅರಸು ಅವರ ಮೇಲೆ ನಿಮಗೆ ಒಂದಿಷ್ಟಾದರೂ ಗೌರವ ಇದ್ದರೆ ಮೊದಲು ಅವರು ಜಾರಿಗೆ ತಂದಿದ್ದ ಉಳುವವನನ್ನೇ ಭೂ ಒಡೆಯನನ್ನಾಗಿ ಮಾಡುವ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿ, ಉಳ್ಳವನಿಗೆ ಭೂಮಿ ನೀಡಲು ಹೊರಟಿರುವ ನಿಮ್ಮ ತೀರ್ಮಾನವನ್ನು ಹಿಂದಕ್ಕೆ ಪಡೆಯಿರಿ’ ಎಂದೂ ಮುಖ್ಯಮಂತ್ರಿ ಅವರನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.</p>.<p>ಆಗಸ್ಟ್ 20ರಂದು ಅರಸು ಜನ್ಮದಿನವಾಗಿದ್ದು, ಅರಸು ಅವರ ಹೆಸರಿನಲ್ಲೇ ಅದೇ ದಿನ ಪ್ರಶಸ್ತಿ ನೀಡುವ ಪದ್ಧತಿಯನ್ನು ಸರ್ಕಾರ ನಡೆಸಿಕೊಂಡು ಬಂದಿತ್ತು.ಪ್ರಶಸ್ತಿ ಪ್ರದಾನ ಮಾಡದೇ ಇರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಚರ್ಚೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>