ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಶಾಸಕರನ್ನು ಕರೆದು ಮಾತಾಡಿಸಲಿಲ್ಲ. ಅವರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಲಿಲ್ಲ. ಐಷಾರಾಮಿ ಹೋಟೆಲ್ ನಲ್ಲಿ ಕುಳಿತು ಅಧಿಕಾರ ನಡೆಸಿದರು. ಹೀಗೆ ಮಾಡಿದ್ದರಿಂದ ಶಾಸಕರು ಸರ್ಕಾರ ಕೆಡವಿದರು. ಆದರೆ, ನಾನೇ ಸರ್ಕಾರ ಕೆಡವಿದೆ ಎನ್ನುತ್ತಿದ್ದಾರೆ. ಕುಮಾರಸ್ವಾಮಿ ಅವರದು ಕುಣಿಯಲು ಬಾರದವರು ನೆಲ ಡೊಂಕು ಅಂದರಂತೆ ಎನ್ನುವ ಸ್ಥಿತಿಯಾಗಿದೆ ಎಂದು ವ್ಯಂಗ್ಯವಾಡಿದರು.