ಬೆಂಗಳೂರು: ಬಿಜೆಪಿ ನಾಯಕರು ಕೇವಲ ಚುನಾವಣೆಯ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳುತ್ತಿದ್ದು, ಆಡಳಿತದ ಬಗ್ಗೆ ಗಮನ ಹರಿಸದೇ ಇರುವುದು ನಿಜಕ್ಕೂ ದುರದೃಷ್ಟಕರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಟೀಕಿಸಿದ್ಧಾರೆ.
ಬಿಜೆಪಿ ನಾಯಕರು ಸಾರ್ವಜನಿಕರಿಗೆ ಬೋಧಿಸಲು ಪ್ರಯತ್ನಿಸುತ್ತಿರುವ ಶಿಷ್ಟಾಚಾರಗಳನ್ನು ತಾವೇಕೆ ಅನುಸರಿಸುತ್ತಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.
It is really unfortunate that @BJP4India & @BJP4Karnataka leaders were only worried about elections but not administration.
— Siddaramaiah (@siddaramaiah) April 17, 2021
Why are @BJP4Karnataka leaders not following the protocols which they are trying to preach to public?
5/5#COVIDEmergency
ಸರ್ಕಾರಿ ಆಸ್ಪತ್ರೆಗಳು ತುಂಬಿರುವುದರಿಂದ, ಜನರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳತ್ತ ಸಾಗುತ್ತಿದ್ದಾರೆ. ಖಾಸಗಿ ಆಸ್ಪತ್ರೆಯ ಶುಲ್ಕವನ್ನು ಭರಿಸಲು ಅನೇಕರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡಲಾದ ರೋಗಿಗಳಿಗೆ ಕೋವಿಡ್ 19 ಚಿಕಿತ್ಸೆಯನ್ನು ಉಚಿತವಾಗಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಕೋವಿಡ್ 19 ಎರಡನೇ ಅಲೆಯ ಈ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರಗಳ ದುರ್ಬಲ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಹಿರಂಗಗೊಂಡಿದೆ ಎಂದು ಅವರು ಟೀಕಿಸಿದ್ದಾರೆ.
With govt hospitals full, people are heading towards private hospitals for the treatment. Many are unable to afford the private hospital charges. I urge @CMofKarnataka & @DHFWKA minister to make #Covid19 treatment free for all the patients referred to the private hospitals.
— Siddaramaiah (@siddaramaiah) April 17, 2021
4/5
ಕೋವಿಡ್ 19 ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಸಿಗದೆ ಜನರು ಅಸಹಾಯಕರಾಗಿದ್ದಾರೆ ಎಂದು ಹೇಳಿದ್ದಾರೆ.
#Covid19 2nd wave crisis has exposed the fragile public care system under the present @BJP4India Central & State govts.
— Siddaramaiah (@siddaramaiah) April 17, 2021
People have become helpless without any medical treatment for Covid19.
1/5#COVIDEmergency
ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿಯೇ ಅದರ ಗಂಭೀರ ಸ್ವರೂಪದ ದರ್ಶನವಾಗಿದೆ. ಆದರೂ, ಸರ್ಕಾರಗಳು ಪಾಠ ಕಲಿತಿಲ್ಲ. ಕೋವಿಡ್ ಚಿಕಿತ್ಸೆಗೆ ಹೆಚ್ಚಾಗಿ ಬಳಸಲಾಗುವ ರೆಮ್ಡಿಸಿವರ್ ಔಷಧಿ ಸ್ಟಾಕ್ ಇಲ್ಲದಾಗಿದೆ. ಸರ್ಕಾರವು ಔಷಧಿಗಳ ದಾಸ್ತಾನು ಏಕೆ ಮಾಡಿಕೊಂಡಿಲ್ಲ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.