<p><strong>ಕೋಲಾರ:</strong> ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಡೆ ಕುತೂಹಲ ಮೂಡಿಸಿದ್ದು, ಕೋಲಾರ ಭೇಟಿಗೂ ಮುನ್ನ ಸೋಮವಾರ ಬೆಂಗಳೂರಿನಲ್ಲಿ ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ.</p>.<p>ಕೋಲಾರದಲ್ಲಿ ಮಧ್ಯಾಹ್ನ ಕೋಲಾರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಲಿದೆ. ಕೆ.ಆರ್.ರಮೇಶ್ ಕುಮಾರ್ ಬಣದ ಪಾರಮ್ಯದಿಂದ ಮುನಿಸಿಕೊಂಡಿರುವ ಮುನಿಯಪ್ಪ ಬಣ ಈ ಸಭೆಗೆ ಗೈರಾಗಲಿದೆ ಎನ್ನಲಾಗಿತ್ತು. </p>.<p>ಅಷ್ಟರಲ್ಲಿ ಹೊಸ ದಾಳ ಎಸೆದಿರುವ ಸಿದ್ದರಾಮಯ್ಯ ಮುನಿಸು ತಣಿಸಲು ಸೀದಾ ಮುನಿಯಪ್ಪ ಮನೆಗೆ ಹೋಗಿದ್ದಾರೆ. ಅಲ್ಲದೇ, ಅವರ ಬೆಂಬಲಿಗರನ್ನು ಭೇಟಿಯಾಗಿ ಸಭೆಗೆ ಬರುವಂತೆ ಹೇಳಿದ್ದಾರೆ. ಜಿಲ್ಲಾ ಕಾಂಗ್ರೆಸ್ ನ ಬಹುತೇಕ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಮುನಿಯಪ್ಪ ನಿವಾಸದಲ್ಲಿ ಸೇರಿದ್ದರು.</p>.<p>ಹೀಗಾಗಿ, ಸಭೆಯಲ್ಲಿ ಮುನಿಯಪ್ಪ ಹಾಗೂ ಬೆಂಬಲಿಗರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಇದರೊಂದಿಗೆ ಒಂದೇ ವೇದಿಕೆಯಲ್ಲಿ ರಮೇಶ್ ಕುಮಾರ್ ಹಾಗೂ ಮುನಿಯಪ್ಪ ಕಾಣಿಸಿಕೊಳ್ಳುವ ಸಂಭವವಿದೆ.</p>.<p>ಉಭಯ ಬಣಗಳಲ್ಲಿನ ಭಿನ್ನಾಭಿಪ್ರಾಯ ಶಮನಗೊಳಿಸದೆ ಸಭೆಗೆ ಹಾಜರಾಗುವುದಿಲ್ಲ ಎಂಬುದು ಮುನಿಯಪ್ಪ ಅವರ ಪ್ರಮುಖ ಷರತ್ತಾಗಿತ್ತು.</p>.<p>ಈಗ ಮುನಿಯಪ್ಪ ಬಣದ ಬೆಂಬಲ ಪಡೆದಿರುವ ಸಿದ್ದರಾಮಯ್ಯ ಇಂದೇ ಕ್ಷೇತ್ರ ಘೋಷಣೆ ಮಾಡುವ ಸಾಧ್ಯತೆ ಇದೆ.</p>.<p>ಸಭೆಗೂ ಮುನ್ನ ಕೋಲಾರದ ಕಾಂಗ್ರೆಸ್ ಭವನದಲ್ಲಿ ಉಭಯ ಬಣಗಳನ್ನು ಮುಖಾಮುಖಿಯಾಗಿಸಿ ಮಾತನಾತನಾಡಲಿದ್ದಾರೆ ಎಂಬುದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಡೆ ಕುತೂಹಲ ಮೂಡಿಸಿದ್ದು, ಕೋಲಾರ ಭೇಟಿಗೂ ಮುನ್ನ ಸೋಮವಾರ ಬೆಂಗಳೂರಿನಲ್ಲಿ ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ.</p>.<p>ಕೋಲಾರದಲ್ಲಿ ಮಧ್ಯಾಹ್ನ ಕೋಲಾರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಲಿದೆ. ಕೆ.ಆರ್.ರಮೇಶ್ ಕುಮಾರ್ ಬಣದ ಪಾರಮ್ಯದಿಂದ ಮುನಿಸಿಕೊಂಡಿರುವ ಮುನಿಯಪ್ಪ ಬಣ ಈ ಸಭೆಗೆ ಗೈರಾಗಲಿದೆ ಎನ್ನಲಾಗಿತ್ತು. </p>.<p>ಅಷ್ಟರಲ್ಲಿ ಹೊಸ ದಾಳ ಎಸೆದಿರುವ ಸಿದ್ದರಾಮಯ್ಯ ಮುನಿಸು ತಣಿಸಲು ಸೀದಾ ಮುನಿಯಪ್ಪ ಮನೆಗೆ ಹೋಗಿದ್ದಾರೆ. ಅಲ್ಲದೇ, ಅವರ ಬೆಂಬಲಿಗರನ್ನು ಭೇಟಿಯಾಗಿ ಸಭೆಗೆ ಬರುವಂತೆ ಹೇಳಿದ್ದಾರೆ. ಜಿಲ್ಲಾ ಕಾಂಗ್ರೆಸ್ ನ ಬಹುತೇಕ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಮುನಿಯಪ್ಪ ನಿವಾಸದಲ್ಲಿ ಸೇರಿದ್ದರು.</p>.<p>ಹೀಗಾಗಿ, ಸಭೆಯಲ್ಲಿ ಮುನಿಯಪ್ಪ ಹಾಗೂ ಬೆಂಬಲಿಗರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಇದರೊಂದಿಗೆ ಒಂದೇ ವೇದಿಕೆಯಲ್ಲಿ ರಮೇಶ್ ಕುಮಾರ್ ಹಾಗೂ ಮುನಿಯಪ್ಪ ಕಾಣಿಸಿಕೊಳ್ಳುವ ಸಂಭವವಿದೆ.</p>.<p>ಉಭಯ ಬಣಗಳಲ್ಲಿನ ಭಿನ್ನಾಭಿಪ್ರಾಯ ಶಮನಗೊಳಿಸದೆ ಸಭೆಗೆ ಹಾಜರಾಗುವುದಿಲ್ಲ ಎಂಬುದು ಮುನಿಯಪ್ಪ ಅವರ ಪ್ರಮುಖ ಷರತ್ತಾಗಿತ್ತು.</p>.<p>ಈಗ ಮುನಿಯಪ್ಪ ಬಣದ ಬೆಂಬಲ ಪಡೆದಿರುವ ಸಿದ್ದರಾಮಯ್ಯ ಇಂದೇ ಕ್ಷೇತ್ರ ಘೋಷಣೆ ಮಾಡುವ ಸಾಧ್ಯತೆ ಇದೆ.</p>.<p>ಸಭೆಗೂ ಮುನ್ನ ಕೋಲಾರದ ಕಾಂಗ್ರೆಸ್ ಭವನದಲ್ಲಿ ಉಭಯ ಬಣಗಳನ್ನು ಮುಖಾಮುಖಿಯಾಗಿಸಿ ಮಾತನಾತನಾಡಲಿದ್ದಾರೆ ಎಂಬುದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>