‘ರಾಜ್ಯದಲ್ಲಿ ಈಗಿನ ಶೇ 55ರಷ್ಟು ಸೋಂಕಿನ ಪ್ರಕರಣಗಳು ಗ್ರಾಮೀಣ ಪ್ರದೇಶದಿಂದ ವರದಿಯಾಗುತ್ತಿರುವುದನ್ನು ತಜ್ಞರು ಗುರುತಿಸಿದ್ದಾರೆ. ತಿಂಗಳ ಹಿಂದೆ ಈ ಪ್ರಮಾಣ ಶೇ 30ರಷ್ಟಿತ್ತು. ಬೆಂಗಳೂರು ನಗರಕ್ಕಷ್ಟೇ ಸೀಮಿತವಾಗದೆ ಜಿಲ್ಲೆ, ತಾಲ್ಲೂಕು, ಗ್ರಾಮಗಳ ಕಡೆ ಗಮನಹರಿಸಬೇಕಾಗಿದೆ. ಗ್ರಾಮೀಣ ಪ್ರದೇಶದ ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ, ಐಸಿಯು, ವೆಂಟಿಲೇಟರ್ ಮತ್ತು ವೈದ್ಯಕೀಯ ಸಿಬ್ಬಂದಿಯ ವ್ಯವಸ್ಥೆ ಬಲಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ.